ಪುತ್ತೂರು(ವಿಶ್ವಕನ್ನಡಿಗ ನ್ಯೂಸ್): ಪುತ್ತೂರು ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಇಪ್ಪತ್ತನೆಯ ವಾರ್ಷಿಕ ಹಾಗೂ ಶರೀಅತ್ ಕಾಲೇಜಿನಲ್ಲಿ ಪದವಿ ಪಡೆದ ವಿದ್ಯಾರ್ಥಿನಿಯರ ಸನದು ದಾನ ಕಾರ್ಯಕ್ರಮವು ಫೆಬ್ರವರಿ 26 ಶುಕ್ರವಾರ ಹಾಗೂ 27 ಶನಿವಾರ ದಿವಸಗಳಲ್ಲಿ ಕುಂಬ್ರದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾರತದ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ. ಪಿ.ಉಸ್ತಾದ್ ಭಾಗವಹಿಸಲಿದ್ದಾರೆ. ಧಾರ್ಮಿಕ ಸಾಮಾಜಿಕ ಕ್ಷೇತ್ರದ ಮುಂದಾಳುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಶನಿವಾರ ನಡೆಯುವ ಸನದುದಾನ ಕಾರ್ಯಕ್ರಮ ದಲ್ಲಿ ಮಹಿಳೆಯರು ಮಾತ್ರ ಪಾಲ್ಗೊಳ್ಳಲು ಅವಕಾಶವಮವಿದ್ದು ಸನದ್ ದಾನಕ್ಕೆ ಪ್ರಮುಖ ಸಯ್ಯಿದಾತ್ಗಳು ಗಣ್ಯ ಮಹಿಳೆಯರು ನೇತೃತ್ವ ಕೊಡಲಿದ್ದಾರೆಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.