ಚಿತ್ರದುರ್ಗ(ವಿಶ್ವಕನ್ನಡಿಗ ನ್ಯೂಸ್): ಫೆಬ್ರವರಿ 28 ರ ಭಾನುವಾರದಂದು ಚಿತ್ರದುರ್ಗದ ಚಳ್ಳಕೆರೆ ತಾಲೂಕಿನಲ್ಲಿ ನಡೆದ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ(ರಿ) ಮತ್ತು ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೋಂ.) ಇವರ ಸಹಯೋಗದಲ್ಲಿ ಆಯೋಜಿಸಲಾದ ವರಕವಿ ದ.ರಾ.ಬೇಂದ್ರೆ ಮತ್ತು ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪನವರ ಜನ್ಮದಿನದ ಪ್ರಯುಕ್ತ ರಾಜ್ಯಮಟ್ಟದ ಕವಿಗೋಷ್ಠಿಯ ಉದ್ಘಾಟನೆಯನ್ನು ನಿರ್ವಹಿಸಿ ಮಾತನಾಡಿದಂತಹ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ನೋಂ. ಇದರ ಅಧ್ಯಕ್ಷರಾದ ಡಾ. ಉಮ್ಮರ್ ಬೀಜದಕಟ್ಟೆ ಇವರು “ವರ್ತಮಾನದ ತಲ್ಲಣಗಳನ್ನು ಹೋಗಲಾಡಿಸಿ ಸಮನ್ವಯತೆಯನ್ನು ತರುವಲ್ಲಿ ಸಾಹಿತ್ಯ ಸಹಕಾರಿ ಮತ್ತು ಜಾಗೃತ ಸಮಾಜದ ನಿರ್ಮಾಣದಲ್ಲಿ ಸಾಹಿತ್ಯವು ಬಹುಮುಖ್ಯ ಪಾತ್ರ ವಹಿಸುತ್ತದೆ” ಎಂಬುದನ್ನು ಬಹಳ ಅರ್ಥಪೂರ್ಣವಾಗಿ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯದ ದೂರಶಿಕ್ಷಣ ನಿರ್ದೇಶನಾಲಯದ ಸಂಶೋಧನಾ ಮತ್ತು ಬೋಧನ ಸಹಾಯಕರಾದ ಡಾ.ಹಸೀನಾ ಹೆಚ್.ಕೆ. ವಹಿಸಿದರು. ಯಕ್ಷಗಾನ ಬಯಲಾಟ ಅಕಾಡೆಮಿಯ ನಿಕಟಪೂರ್ವ ಸದಸ್ಯರು ಹಾಗೂ ಚಿತ್ರದುರ್ಗದ ಸಾಹಿತಿಗಳಾದ ಡಾ. ಬಿ.ಎಮ್. ಗುರುನಾಥ್ ಆಶಯನುಡಿಗಳನ್ನಾಡಿದರು.
ಮುಖ್ಯ ಅತಿಥಿಗಳಾಗಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಗೌರವ ಸಲಹೆಗಾರರಾದ ಶ್ರೀ. ಕೊರ್ಲಕುಂಟೆ ತಿಪ್ಪೇಸ್ವಾಮಿ, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಚಳ್ಳಕೆರೆ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀಮತಿ ಡಿ.ಶಬ್ರೀನಾ ಮಹಮ್ಮದ್ ಅಲಿ, ಸಜ್ಜನ ಕನ್ನಡ ನಾಡು ನುಡಿ ವಿಭಾಗದ ಜಿಲ್ಲಾಧ್ಯಕ್ಷರಾದ ಶ್ರೀ ಮಂಜುನಾಥ್ ಹಿರಿಯೂರು, ಲೇಖಕಿ ಶ್ರೀಮತಿ ಗೀತಾ ನಾಗರಾಜ್ ಚಳ್ಳಕೆರೆ, ಖ್ಯಾತ ಜಾನಪದ ಹಾಡುಗಾರ್ತಿ ಶ್ರೀಮತಿ ಸಿರಿಯಮ್ಮ ಮುಂತಾದವರು ಭಾಗವಿಹಿಸಿದ್ದರು. ಹಲವು ಶಿಕ್ಷಕರು ಮತ್ತು ಕವಿ ಕವಯಿತ್ರಿಗಳು ತಮ್ಮ ಸ್ವರಚಿತ ಕವನ ವಾಚನ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.