ಚಿಕ್ಕಬಳ್ಳಾಪುರ,(ವಿಶ್ವಕನ್ನಡಿಗ ನ್ಯೂಸ್): ಸ್ವಾತಂತ್ರ್ಯ ಹೋರಾಟದ ಇತಿಹಾಸವಿರುವ ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮರಣ ಕೇಂದ್ರವಾಗಿ ರೂಪಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.
ವಿದುರಾಶ್ವತ್ಥದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ವಿದುರಾಶ್ವತ್ಥದಲ್ಲಿ 1938 ರಲ್ಲಿ ಧ್ವಜಾರೋಹಣ ನೆರವೇರಿಸುವ ವೇಳೆ ಬ್ರಿಟಿಷರು ಗುಂಡಿನ ದಾಳಿ ನಡೆಸಿ ಹೋರಾಟಗಾರರು ಹುತಾತ್ಮರಾದರು ವಿದುರಾಶ್ವತ್ಥಕ್ಕೆ ತನ್ನದೇ ಆದ ಇತಿಹಾಸವಿದೆ ಧಾರ್ಮಿಕ ಪರಂಪರೆಯಿದೆ ವಿದುರ ಎನ್ನುವರ ಮಹಾಜ್ಞಾನಿ ಮಹಾಮುನಿ ಪಾಂಡವರು ಮತ್ತು ಕೌರವರಿಗೆ ಆದರ್ಶ ವ್ಯಕ್ತಿಯಾಗಿ ಮತ್ತು ಮಾರ್ಗದರ್ಶಗಳಾಗಿದ್ದರು ಅಂತಹವರು ಈ ಗ್ರಾಮಕ್ಕೆ ಬಂದು ಅಶ್ವತ್ಥಕಟ್ಟೆ ನಿರ್ಮಿಸಿದರು ಅಶ್ವತ್ಥ ಗಿಡವನ್ನು ನೆಡೆಸಿದರು ಇತಹಾಸದಲ್ಲಿ ಉಲ್ಲೇಖ ಮಾಡಲಾಗಿದೆ ಅನೇಕ ನಾಗರಪಂಚಮಿಗಳನ್ನು ಮಾಡುವಂತಹದ್ದು ನಾಗರ ಪ್ರತಿಷ್ಠೆ ಮಾಡಿದ್ದಾರೆ ದೂರದ ಪ್ರದೇಶಗಳಿಂದ ಬಂದು ಇಲ್ಲಿ ಪೂಜೆ ಪುನಸ್ಕಾರಗಳನ್ನು ನಡೆಸಲಾಗುತ್ತಿದೆ ಇದನ್ನು ಐತಿಹಾಸಿಕ, ಧಾರ್ಮಿಕ ತಾಣವಾಗಿ ಅಭಿವೃದ್ಧಿಪಡಿಸಿ, ಅಂತಾರಾಷ್ಟ್ರೀಯ ಸ್ಮರಣ ಕೇಂದ್ರವಾಗಿ ರೂಪಿಸಬೇಕು. ಈಗಾಗಲೇ ಸಮಿತಿಯು ಡಿಪಿಆರ್ ಮಾಡಿಕೊಟ್ಟಿದ್ದು, ಇದಕ್ಕಾಗಿ 15-16 ಕೋಟಿ ರೂ. ಖರ್ಚಾಗುತ್ತದೆ ಈ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಸ್ವಾತಂತ್ರ್ಯ ಪಡೆದು 75 ವರ್ಷವಾಗುತ್ತಿರುವ ಸಂದರ್ಭದಲ್ಲಿ ದೇಶಾದ್ಯಂತ ಸಂಭ್ರಮಾಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಬಗ್ಗೆ ಚಿಂತನೆ ನಡೆಸಲು ಕಾರ್ಯಕ್ರಮ ನಡೆಸುವಂತೆ ಕರೆ ನೀಡಿದ್ದಾರೆ ಸ್ವಾತಂತ್ರ್ಯಕ್ಕಾಗಿ ಅನೇಕರು ಹುತಾತ್ಮರಾಗಿದ್ದು, ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮ ನಡೆಯುತ್ತಿದೆ ಐತಿಹಾಸಿಕ, ಧಾರ್ಮಿಕ ಕ್ಷೇತ್ರವಾದ ವಿದುರಾಶ್ವತ್ಥದಲ್ಲಿ ಕೂಡ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದರು.
ಕೃಷ್ಣಾ ನದಿಯಿಂದ 5 ಟಿಎಂಸಿಯನ್ನು ಆಂಧ್ರಪ್ರದೇಶದಿಂದ ಸಹಕಾರದಿಂದ ಪಡೆದರೆ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ನೀರಾವರಿ ಕಲ್ಪಿಸಬಹುದು. ನಮ್ಮ ನದಿ ಮೂಲಗಳಿಂದ ಆ ರಾಜ್ಯದ ಜನರಿಗೆ ನೀರು ನೀಡಬಹುದು. ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾಗಿದ್ದು, ಮುಂದಿನ ವರ್ಷದ ಜೂನ್ಗೆ ಸಿದ್ಧವಾಗಲಿದೆ ಎಂದರು.
ಕೋವಿಡ್ ಆರ್ಥಿಕ ಸಂಕಷ್ಟವಿರುವುದರಿಂದ ಈ ಬಾರಿ ಹೆಚ್ಚಿನ ಗಾತ್ರದ ಬಜೆಟ್ ನೀಡುವುದಿಲ್ಲ ಎಂಬ ಅಪನಂಬಿಕೆ ಇತ್ತು. ಆದರೆ ಮುಖ್ಯಮಂತ್ರಿಗಳು ಹೆಚ್ಚು ಗಾತ್ರದ ಬಜೆಟ್ ಮಂಡಿಸಿ ಎಲ್ಲ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ನೀಡಿದ್ದಾರೆ ಮಹಿಳಾ ಅಸಮಾನತೆ ದೂರವಾಗಿಸಲು, ಅಂತಾರಾಷ್ಟ್ರೀಯ ಮಹಿಳಾ ದಿನದಂದು ಮಂಡಿಸಿದ ಬಜೆಟ್ನಲ್ಲಿ ಮಹಿಳಾ ಸಬಲೀಕರಣಕ್ಕೆ ಉತ್ತಮ ಕೊಡುಗೆ ನೀಡಲಾಗಿದೆ ನಂದಿ ಬೆಟ್ಟ, ಎತ್ತಿನೆಹೊಳೆ ಯೋಜನೆ ಜಾರಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜಿಲ್ಲೆಗೆ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯಪಾಲ ವಾಜುಭಾಯಿ ವಾಲಾ,ಸಿಎಂ ಬಿಎಸ್ ಯಡಿಯೂರಪ್ಪ,ಸಂಸದರಾದ ಬಚ್ಚೇಗೌಡ,ಮುನಿಸ್ವಾಮಿ,ಪಿಸಿ ಮೋಹನ್,ವಿಧಾನ ಪರಿಷತ್ತಿನ ಸದಸ್ಯ ವೈ.ಎ.ನಾರಾಯಣಸ್ವಾಮಿ, ಎಸಿ ರಘುನಂದನ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ತೆ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.