ಉಳ್ಳಾಲ (www.vknews.com) : ಕೆಸಿ ರೋಡಿನಲ್ಲಿ ನಡೆದ 12 ವರ್ಷದ ಬಾಲಕನ ಕೊಲೆ ಪ್ರಕರಣದ ಬಗ್ಗೆ ವಿವಿಧ ಆಯಾಮಗಳ ಮೂಲಕ ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಒತ್ತಾಯಿಸಿದೆ. ಕೆಸಿ ರೋಡು ನಿವಾಸಿ ಹನೀಫ್ ಎಂಬುವವರ ಪುತ್ರ ಹಾಕಿಫ್ ಎಂಬಾತ ನಿನ್ನೆ ರಾತ್ರಿಯಿಂದ ಕಾಣೆಯಾಗಿದ್ದು ಇಂದು ಆತನ ಮೃತದೇಹ ಕೊಲೆಗೈಯಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು..
ಪ್ರಕರಣದ ಸಂಬಂಧ ಪೊಲೀಸರು ಈಗಾಗಲೇ ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದು ಆನ್ಲೈನ್ ಗೇಮ್ ವಿಚಾರವಾಗಿ ನಡೆದ ತರ್ಕ ಈ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಆದರೆ ರಾತ್ರಿ ಈ ಬಾಲಕನನ್ನು ಆರೋಪಿ ಕರೆ ಮಾಡಿ ನಿರ್ಜನವಾದ ಪೊದೆಯಿಂದ ಕೂಡಿದ ಪ್ರದೇಶಕ್ಕೆ ಕರೆಸಿಕೊಳ್ಳಲು ಕಾರಣವೇನು ? ಬಾಲಕನನ್ನು ಕರೆಸಿ ಆತನಿಗೆ ಕಿರುಕುಳ ನೀಡಲಾಗಿದೆಯೇ ? ಘಟನೆಯಲ್ಲಿ ಆರೋಪಿ ಜೊತೆ ಬೇರೆ ಯಾರದರೂ ಶಾಮಿಲಾಗಿದ್ದಾರೆಯೇ ಎಂಬ ಗೊಂದಲ ಹಾಗೂ ಸಂಶಯ ಸಾರ್ವಜನಿಕರಲ್ಲಿ ಹುಟ್ಟು ಹಾಕಿದೆ. ಹೀಗಿರುವಾಗ ಪೊಲೀಸ್ ಇಲಾಖೆ ಈ ಪ್ರಕರಣದ ಬಗ್ಗೆ ವಿವಿಧ ಆಯಮಗಳಿಂದ ತನಿಖೆ ನಡೆಸಿ ಸಾರ್ವಜನಿಕರ ಸಂಶಯಗಳಿಗೆ ತೆರೆ ಎಳೆದು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಮುಂದಾಗಬೇಕೆಂದು ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯ ಅಧ್ಯಕ್ಷ ಅಶ್ರಫ್ ಕೆಸಿ ರೋಡ್ ಹಾಗೂ ಕಾರ್ಯದರ್ಶಿ ಸುನಿಲ್ ತೇವುಲ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.