ಪುತ್ತೂರು(ವಿಶ್ವಕನ್ನಡಿಗ ನ್ಯೂಸ್): ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿಂದು ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಕೆಪಿಸಿಸಿ ಸಂಯೋಜಕರು ಆಗಿರುವ ಕಾವು ಹೇಮನಾಥ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು .
ಅಂಬೇಡ್ಕರ್ ಬಾವಚಿತ್ರಕ್ಕೆ ಪುಪ್ಪಮಾಲೆ ಹಾಕಿ ನಮನ ಸಲ್ಲಿಸಿ ಮಾತನಾಡಿದ ಹೇಮನಾಥ್ ಶೆಟ್ಟಿ ಅವರು ಅಂಬೇಡ್ಕರ್ ಅವರು ಹಾಕಿಕೊಟ್ಟ ತತ್ವ ಸಿದ್ದಾಂತಗಳನ್ನು ನಮ್ಮಲ್ಲಿ ನಾವುಗಳು ಮೈಗೂಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಆಸಮಾನತೆ ಅಸ್ಪೃಶ್ಯತೆ , ನಿವಾರಣೆ ಆಗಲು ಸಾಧ್ಯ , ಅದು ಈಗಿನ ದಿನಗಳಲ್ಲಿ ಅತ್ಯಗತ್ಯವಾಗಿ ಬೇಕಾಗಿದೆ ,ಆ ಮೂಲಕ ನಮ್ಮ ದೇಶಕ್ಕೆ ಸಂವಿಧಾನ ದ ಕೊಡುಗೆ ನೀಡಿರುವ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸುವ ಕೆಲಸ ನಮ್ಮೆಲ್ಲರಿಂದ ಆಗಬೇಕು ಎಂದರು.
ಕೆಪಿಸಿಸಿ ನಾಯಕರಾಗಿರುವ ಡಾ ರಘು ಬೆಳ್ಳಿಪ್ಪಾಡಿ ಅವರು ಮಾತನಾಡಿ ಅಂಬೇಡ್ಕರ್ ಅವರು ನಿರ್ಮಿಸಿಕೊಟ್ಟ ಸಂವಿಧಾನದಿಂದಲೇ ನಾವೆಲ್ಲರೂ ಇಂದು ಸಮಾಜದಲ್ಲಿ ಗುರುತಿಸಿಕೊಳ್ಳುವಂತೆ ಆಗಿದೆ ಎಂದರು.ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ ಮತ್ತು ಡಿಸಿಸಿ ಸದಸ್ಯ ಐತ್ತಪ್ಪರವರು ಸಂದರ್ಭೋಚಿತವಾಗಿ ಮಾತನಾಡಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ , ಪ್ರಧಾನ ಕಾರ್ಯದರ್ಶಿ ಅಬ್ದುಲ್ ರೆಹಮಾನ್ ಬಪ್ಪಳಿಗೆ,ರಾಜ್ಯ ಕೊಂಕಣಿ ಅಕಾಡಮಿ ಮಾಜಿ ಸದಸ್ಯ ದಾಮೋದರ್ ಭಂಡಾರ್ಕರ್, ಅನ್ವರ್ ಖಾಸೀಂ,ಪುತ್ತೂರು ಪುರಸಭೆ ಮಾಜಿ ಉಪಾಧ್ಯಕ್ಷ ಲಾನ್ಸಿ ಮಸ್ಕರೇನಸ್, ಬ್ಲಾಕ್ ಕಾಂಗ್ರೆಸ್ ಮಾಜಿ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ನವೀನ್ ರೈ ಚೆಲ್ಯಡ್ಕ,ಎನ್ ಎಸ್ ಯು ಐ ರಾಜ್ಯ ಕಾರ್ಯದರ್ಶಿ ಫಾರೂಕ್ ಬಾಯಬೆ, ಕೆಪಿಸಿಸಿ ಸಾಮಾಜಿಕ ಜಾಲತಾಣ ಕಾರ್ಯದರ್ಶಿ ಕೆ ಸಿ ಅಶೋಕ್ ಶೆಟ್ಟಿ, ಯಾಕೂಬ್ ದರ್ಭೆ, ಪುರಸಭೆ ಮಾಜಿ ಸದಸ್ಯ ಇಸಾಕ್ ಸಾಲ್ಮರ, ಆನಂದ ಕೌಡಿಚ್ಚಾರ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಗನ್ ಶೆಟ್ಟಿ ಕಾವು ಉಪಸ್ಥಿತರಿದ್ದರು. ಗಂಗಾಧರ ಶೆಟ್ಟಿ ಎಲಿಕ ಸಹಕರಿಸಿದರು. ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಪಾಣಾಜೆ ಸ್ವಾಗತಿಸಿ ಸಾಮಾಜಿಕ ಜಾಲತಾಣ ಸಂಚಾಲಕ ಜಗದೀಶ್ ಕಜೆ ವಂದಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.