ಚಾಮರಾಜನಗರ (ವಿಶ್ವ ಕನ್ನಡಿಗ ನ್ಯೂಸ್) : ನಗರದ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟ ಘೋರ ಘಟನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.
ಆಕ್ಸಿಜನ್ ಕೊರತೆಯಿಂದ 24 ಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆಯಾದರೂ ಸಮಗ್ರ ಕೂಲಂಕಷ ತನಿಖೆ ನಡೆಸಲು ತೀರ್ಮಾನಿಸಿರುವ ರಾಜ್ಯ ಸರ್ಕಾರ, ಐಎಎಸ್ ಅಧಿಕಾರಿ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿದ್ದು, ಮೂರು ದಿನಗಳೊಳಗೆ ವರದಿ ಸಲ್ಲಿಸುವಂತೆ ಶಿವಯೋಗಿ ಕಳಸದ ಅವರಿಗೆ ಸರ್ಕಾರ ಸೂಚಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.