ವಿಟ್ಲ(ವಿಶ್ವಕನ್ನಡಿಗ ನ್ಯೂಸ್): ಸಹಾಯ್ ವಿಟ್ಲ ಸರ್ಕಲ್ ತುರ್ತು ಸೇವಾ ತಂಡದ ವತಿಯಿಂದ ಕೋರೋನಾ ವಾರಿಯರ್ಸ್ ಹಾಗೂ ರೋಗಿಗಳಿಗೆ ಆಹಾರ ವಿತರಣೆ ಮಾಡಿ ಸರಳವಾಗಿ ಬಕ್ರೀದ್ ಹಬ್ಬ ಆಚರಿಸಿದರು.
ವಿಟ್ಲ ಪಟ್ಟಣ ಹಾಗೂ ಆಸುಪಾಸಿನಲ್ಲಿರುವ ಗ್ರಾಮಗಳಲ್ಲಿ ಪ್ರವಾಹದೊಪಾದಿಯಲ್ಲಿ ಹಬ್ಬುತ್ತಿದ್ದ ಕೋರೊನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಯಾವುದೇ ಜಾತಿ ಮತ ವರ್ಣ ಬೇದ ನೋಡದೆ ಕೊರೋನಾ ನಿಯಂತ್ರಣ ಕಾರ್ಯದಲ್ಲಿ ಹಗಲಿರುಳು ಶ್ರಮಿಸಿದ ವೈದ್ಯರು ಶುಶ್ರೂಷಕರು ಆಶಾ ಕಾರ್ಯಕರ್ತೆಯರು ಪೊಲೀಸ್ ಇಲಾಖೆ ಮತ್ತಿತರ ಸಿಬ್ಬಂದಿಗಳಿಗೆ ಬಕ್ರೀದ್ ಹಬ್ಬದ ಪ್ರಯುಕ್ತ ಆಹಾರ ಕಿಟ್ ವಿತರಿಸಲಾಯಿತು.
ಈ ಬಾರಿಯ ಬಕ್ರೀದ್ ಹಬ್ಬವನ್ನು ಕೋರೋಣ ವಾರಿಯರ್ಸ್ ಗಳಾದ ವಿಟ್ಲ ಪಟ್ಟಣ ಪಂಚಾಯತ್ ವಿಟ್ಲ ಪೊಲೀಸ್ ಠಾಣೆ ವಿಟ್ಲ ಪ್ರಾಥಮಿಕ ಆರೋಗ್ಯ ಕೇಂದ್ರ ವಿಟ್ಲ ಮೆಸ್ಕಾಂ ಸಿಬಂದಿಗಳು ಹಾಗೂ ಕನ್ಯಾನ ಪ್ರಾಥಮಿಕ ಆರೋಗ್ಯ ಕೇಂದ್ರ ಕನ್ಯಾನ ಪೊಲೀಸ್ ಹೊರ ಠಾಣೆ ಅಳಿಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಉಕ್ಕುಡ ಅರಣ್ಯ ಇಲಾಖೆ ಸಿಬ್ಬಂದಿಗಳು ಸೇರಿದಂತೆ ಆಶಾ ಕಾರ್ಯಕರ್ತೆಯರ ಸಹಿತ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ಇನ್ನೂರಕ್ಕೂ ಮಿಕ್ಕ (ಹಬ್ಬದೂಟ) ಆಹಾರ ಕಿಟ್ ವಿತರಣೆ ಮಾಡಿ ಸರಳವಾಗಿ ವಿನೂತನವಾಗಿ ಆಚರಿಸಿದೆ,
ವರದಿ: D.A ಮುಹಮ್ಮದ್ ಅಶ್ರಫ್ ಕೊಡಂಗಾಯಿ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.