ಮಡಿಕೇರಿ (www. vknews.in):ಎಸ್ ಕೆ ಎಸ್ ಎಸ್ ಎಫ್ ಜಿಸಿಸಿ ಕೊಡಗು ಸಮಿತಿಯ ವತಿಯಿಂದ “ಸ್ವಾತಂತ್ರ್ಯ ಸರ್ವರಿಗೂ ಸಮಾನವಾಗಿರಲಿ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ಆನ್ಲೈನ್ ಕಾರ್ಯಕ್ರಮದ ಮೂಲಕ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಎಸ್ ಕೆ ಎಸ್ ಎಸ್ ಎಫ್ ಕೊಡಗು ಜಿಲ್ಲಾಧ್ಯಕ್ಷರಾದ ತಮ್ಲೀಕ್ ದಾರಿಮಿ ಉದ್ಘಾಟಿಸಿದರು. ಕಾರ್ಯಕ್ರಮದ ಕೇಂದ್ರಬಿಂದು, ಮುಖ್ಯ ಭಾಷಣಕಾರರಾಗಿ ಆಗಮಿಸಿದ ಟ್ರೆಂಡ್ ಕೇಂದ್ರ ಸಮಿತಿ ಸದಸ್ಯರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ SKSSF ಕಾರ್ಯದರ್ಶಿಯಾದ ಕೆ.ಎಂ ಇಕ್ಬಾಲ್ ಬಾಳಿಲ ಮಾತನಾಡುತ್ತಾ, ಭಾರತದ ಸ್ವಾತಂತ್ರ್ಯಕ್ಕಾಗಿ ಮುಸ್ಲಿಮರ ಕೊಡುಗೆಗಳು,ವೀರಸೇನಾನಿಗಳ ತ್ಯಾಗ-ಬಲಿದಾನಗಳ ಚರಿತ್ರೆಗಳು, ಇತಿಹಾಸದ ಪುಟಗಳು ತಿರುವಿದಾಗ ಲಭ್ಯವಾಗುವ ಮೈನವಿರೇಳಿಸುವ ದೃಶ್ಯಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಆದರೆ ದುರಾದೃಷ್ಟವಶಾತ್ ಈ ಚರಿತ್ರೆಗಳು ಇತಿಹಾಸದ ಪುಟಗಳಿಂದ ಕಣ್ಮರೆಯಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಭಾರತೀಯರಾದ ನಮ್ಮ ಮೇಲೆ, ಮುಂದಿನ ಪೀಳಿಗೆಗೆ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸಗಳನ್ನು ಉಳಿಸಿಕೊಂಡು ಹೋಗುವ ಬಹುದೊಡ್ಡ ಜವಾಬ್ದಾರಿ ಇದೆ ಎಂದು ಒತ್ತಿ ಹೇಳಿದರು.
ಪ್ರಾಸ್ತಾವಿಕವಾಗಿ ಎಸ್ ಕೆ ಎಸ್ ಎಸ್ ಎಫ್ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಹೈಬ್ ಫೈಝಿ ಹಿತನುಡಿಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಕೆ ಎಸ್ ಎಸ್ ಎಫ್ ಜಿಸಿಸಿ ಕೊಡಗು ಅಧ್ಯಕ್ಷರಾದ ಹುಸೈನ್ ಫೈಝಿ ವಹಿಸಿದ್ದರು. SKSSF ಕೊಡಗು ಜಿಲ್ಲಾ ಕೋಶಾಧಿಕಾರಿ ಸಿದ್ದೀಕ್ ಹಾಜಿ, ಮಾಧ್ಯಮ ವಿಭಾಗ ಅಧ್ಯಕ್ಷರಾದ ಶಫೀಕ್ ನೆಲ್ಲಿಯಹುದಿಕೇರಿ ಹಾಗೂ ಎಸ್ ಕೆ ಎಸ್ ಎಸ್ ಎಫ್ ಜಿಸಿಸಿ ಕೊಡಗು ಸಮಿತಿಯ ನಾಯಕರುಗಳು, ಸದಸ್ಯರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಝೈನುದ್ದೀನ್ ಉಸ್ತಾದ್ ಪ್ರಾರ್ಥನೆ ನೆರವೇರಿಸಿ, ಅಶ್ಫಾಕ್ ಕೊಡ್ಲಿಪೇಟೆ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳಿಗೆ ಸ್ವಾಗತ ಕೋರಿದರು. ಅಬ್ದುಲ್ ಗಫೂರ್ ವಂದಿಸಿ ಯಹ್ಯಾ ಕೊಡ್ಲಿಪೇಟೆ ಕಾರ್ಯಕ್ರಮ ನಿರೂಪಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.