ಫರಂಗಿಪೇಟೆ (www.vknews.com) : ಅಡುಗೆ ಅನಿಲಕ್ಕೆ ಕೇಂದ್ರ ಸರಕಾರ ನಿಯಂತ್ರಣ ಇಲ್ಲದೆ ನಿರಂತರ ಬೆಲೆ ಏರಿಸುತ್ತಿರುವುದನ್ನು ಖಂಡಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪುದು ಗ್ರಾಮ ಸಮಿತಿ ವತಿಯಿಂದ ಫರಂಗಿಪೇಟೆಯಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು
ಈ ಸಂದರ್ಭದಲ್ಲಿ ಮಾತಾನಾಡಿದ ಬಂಟ್ವಾಳ ಪುರಸಭಾ ಸದಸ್ಯ ಮುನೀಶ್ ಬಂಟ್ವಾಳ ಬಿಜೆಪಿ ಪಕ್ಷ ಹಿಂದಿನ ಸರಕಾರದ ವೈಫಲ್ಯಗಳನ್ನು ಎತ್ತಿತೋರಿಸಿ ಒಳ್ಳೆಯ ದಿನಗಳು ಬರಲಿವೆ ಎಂದು ಅಧಿಕಾರ ದಕ್ಕಿಸಿ ಜನರಿಗೆ ದ್ರೋಹ ಬಗೆದಿದೆ. ಇಂಧನ, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಇತ್ಯಾದಿ ಜನವಿರೋಧಿ ನೀತಿಗಳಿಂದ ಜನ ತತ್ತರಿಸಿ ಬದುಕು ಸಾಗಿಸಲು ಸಂಕಷ್ಟ ಎದುರಿಸುವ ಕೆಟ್ಟ ದಿನಗಳ ಸವಾಲುಗಳನ್ನು ಬಡ ಮಧ್ಯಮ ವರ್ಗ ಎದುರಿಸುತ್ತಿದೆ.
ಕೇಂದ್ರ ಸರಕಾರದ ಜನವಿರೋಧಿ ನೀತಿಗಳನ್ನು ಪ್ರತಿರೋಧಿಸಲು ವಿರೋಧ ಪಕ್ಷಗಳು ಬೀದಿಯನ್ನು ವೇದಿಕೆ ಮಾಡುವ ಬದಲು ಸದನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಿ ಎಂದು ಹೇಳಿದರು
ಪ್ರತಿಭಟನಾಕಾರರು ಗ್ಯಾಸ್ ಸಿಲಿಂಡರ್ ಇಟ್ಟು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು
ಪ್ರತಿಭಟನೆಯ ನೇತ್ರತ್ವವನ್ನು ಎಸ್ಡಿಪಿಐ ಪುದು ಗ್ರಾಮ ಸಮಿತಿ ಅಧ್ಯಕ್ಷ ಇಕ್ಬಾಲ್ ಅಮೆಮ್ಮಾರ್ ವಹಿಸಿದರು, ಪುದು ಗ್ರಾಮ ಪಂಚಾಯತ್ ಸದಸ್ಯ ನಝೀರ್ ಕುಂಜತ್ಕಳ, ಕ್ಷೇತ್ರ ಸಮಿತಿ ಉಪಾಧ್ಯಕ್ಷ ಸುಲೈಮಾನ್ ಉಸ್ತಾದ್, ಲೇತಿಫ್ ಮಾರಿಪ್ಪಳ್ಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಶೆರೀಫ್ ಅಮೆಮ್ಮಾರ್ ಸ್ವಾಗತಿಸಿ ನಿರೂಪಿಸಿದರು.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.