ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ): ಇಲ್ಲಿನ ಸಂತೆಕಟ್ಟೆಯಲ್ಲಿ ರಸ್ತೆ ಮಧ್ಯೆ ಪ್ರಿಯಕರನೊಬ್ಬ ತನ್ನ ಪ್ರೆಯಸಿಗೆ ಚಾಕುವಿನಿಂದ ಇರಿದು ಬಳಿಕ ತಾನು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಅಂಬಾಗಿಲು ಸಮೀಪದ ಕಕ್ಕುಂಜೆಯಲ್ಲಿ ವಾಸಿಸುತ್ತಿರುವ ವಿಠಲ್ ಭಂಡಾರಿ ಮತ್ತು ಸುಶೀಲಾ ದಂಪತಿಯ ಪುತ್ರಿ ಸೌಮ್ಯಶ್ರೀ (28) ಸೋಮವಾರ ನಿಧನರಾಗಿದ್ದು, ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್ (28) ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಮೃತಪಟ್ಟಿದ್ದಾರೆ.
ಘಟನೆ ಹಿನ್ನಲೆ : ಪ್ರಿಯಕರ ಸಂದೇಶ್ ಕುಲಾಲ್, ಸೌಮ್ಯಶ್ರೀಗೆ ಚಾಕು ಇರಿದು, ತಾನು ಕತ್ತು ಕೊಯ್ದುಕೊಂಡಿದ್ದ. ಈ ಘಟನೆ ಸೋಮವಾರ ಉಡುಪಿಯ ಸಂತಕಟ್ಟೆಯಲ್ಲಿ ಸಂಜೆ ನಡೆದಿತ್ತು. ಸೌಮ್ಯಶ್ರೀ ಕೆಲಸ ಮುಗಿಸಿ, ಮನೆಗೆ ಹೋಗುತ್ತಿದ್ದಾಗ ಸ್ಕೂಟಿಯನ್ನು ತಡೆದು ಸಂದೇಶ್ ಕೃತ್ಯ ಎಸಗಿದ್ದ. ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಸೌಮ್ಯಶ್ರೀ ಸಾವಿಗೀಡಾದರೆ, ಗಾಯಗೊಂಡಿರುವ ಸಂದೇಶ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಇಂದು ಮುಂಜಾನೆ ಇಹ ಲೋಕ ತ್ಯಜಿಸಿದ್ದಾರೆ .ಉಡುಪಿಯ ಸಂತೆಕಟ್ಟೆ ಸಮೀಪ ಉದ್ಯೋಗಿಯಾಗಿದ್ದ ಸೌಮ್ಯಶ್ರೀ ಮತ್ತು ಸಂದೇಶ್ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಸೌಮ್ಯಶ್ರೀಗೆ ವಾರದ ಹಿಂದಷ್ಟೇ ನಿಶ್ಚಿತಾರ್ಥ ನೆರವೇರಿತ್ತು. ಇದರಿಂದ ಗೆಳೆಯ ಸಂದೇಶ ಕುಲಾಲ್ ಕುಪಿತಗೊಂಡಿದ್ದ. ಕೆಲಸ ಮುಗಿಸಿ ಮನೆ ಕಡೆ ಬರುತ್ತಿದ್ದ ಸೌಮ್ಯಶ್ರೀ ಸ್ಕೂಟಿ ಯನ್ನು ಹಿಂಬಾಲಿಸಿ ಸಂದೇಶ್ ಚಾಕು ತೆಗೆದು ಸೌಮ್ಯಶ್ರೀ ಸ್ಥಳದಲ್ಲೇ ಇರಿದಿದ್ದಾನೆ. ನಂತರ ಅದೇ ಚಾಕುವಿನಿಂದ ತನ್ನ ಕುತ್ತಿಗೆ ಕೊಯ್ದುಕೊಂಡಿದ್ದಾನೆ. ಇಬ್ಬರು ಒದ್ದಾಡುವುದನ್ನು ನೋಡಿದ ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.ಉಡುಪಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.