ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಚಾಲಕನ ನಿಯಂತ್ರಣ ತಪ್ಪಿ ಐಶಾರಾಮಿ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮವಾಗಿ 7 ಮಂದಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಬಳಿಯಲ್ಲಿ ನಡೆದಿದೆ.
ಆಡಿ ಕಾರು ಫುಟ್ ಪಾತ್ ಮೇಲಿನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಹೊಸೂರು ಡಿಎಂಕೆ ಶಾಸಕ ವೈ. ಪ್ರಕಾಶ್ ಪುತ್ರ ಕರುಣಾ ಸಾಗರ್, ಭಾವಿ ಸೊಸೆ ಬಿಂದೂ, ಇಷಿತಾ, ಧನುಷಾ, ಅಕ್ಷಯ್ ಗೋಯಲ್, ರೋಹಿತ್ ಹಾಗೂ ಉತ್ಸವ್ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಒಬ್ಬರು ಕರ್ನಾಟಕ, ಇಬ್ಬರು ಕೇರಳಕ್ಕೆ ಸೇರಿದ್ದು, ಎಲ್ಲರೂ ನಗರದ ಪಿಜಿಯಲ್ಲಿ ಉಳಿದುಕೊಂಡಿದ್ದರು ಎನ್ನಲಾಗುತ್ತಿದೆ.
ತಡರಾತ್ರಿ ಸುಮಾರು 1.45ರಿಂದ 2 ಗಂಟೆ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಮತ್ತೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಅತಿ ವೇಗ ಹಾಗೂ ನಿರ್ಲಕ್ಷ್ಯ, ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.