ಶ್ರೀನಿವಾಸಪುರ(ವಿಶ್ವಕನ್ನಡಿಗ ನ್ಯೂಸ್):-ದರಖಾಸ್ತುದಾರರಿಗೆ ನಿಯಮಾನುಸಾರ ಜಮೀನು ಮಂಜೂರು ಮಾಡಲಾಗುವುದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ ದರಖಾಸ್ತು ಕಮಿಟಿ ಸಭೆಯಲ್ಲಿ ಮಾತನಾಡಿ , ಮೊದಲಿಗೆ ನಿಯಮ ೫೩ ರ ಅಡಿಯಲ್ಲಿ ಹಾಕಲಾಗಿರುವ ಅರ್ಜಿಗಳನ್ನು ಇತ್ಯರ್ಥಪಡಿಸಲಾಗುವುದು. ನಿಯಮ ೫೭ ಅಡಿ ಸಲ್ಲಿಸಲಾಗಿರುವ ಅರ್ಜಿಗಳ ಇತ್ಯರ್ಥಕ್ಕೆ ಸರ್ಕಾರ ಇನ್ನೂ ಅನುಮೋದನೆ ನೀಡಿಲ್ಲ ಎಂದು ಹೇಳಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಆಗಿರುವ ಪ್ರಗತಿಯ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ . ಹೊಸದಾಗಿ ಐದು ಮಂದಿಗೆ ಸಾಗುವಳಿ ಚೀಟಿ ನೀಡಲಾಯಿತು . ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ , ಪೊಲೀಸ್ ಇನ್ಸ್ಪೆಕ್ಟರ್ ಸಿ.ರವಿಕುಮಾರ್ , ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ , ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ , ರಾಯಲ್ಪಾಡ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ರಡ್ಡಿ ಇದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.