ಕೋಲಾರ (ವಿಶ್ವ ಕನ್ನಡಿಗ ನ್ಯೂಸ್) :-ಮುಂದಿನ ಪೀಳಿಗೆಯು ಆರೋಗ್ಯಕರವಾಗಿರಬೇಕಾದರೆ ಅಪೌಷ್ಟಿಕತೆಯ ಬಗ್ಗೆ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಅರಿವು ಮೂಡಿಸಿ , ಅಪೌಷ್ಟಿಕತೆಯನ್ನು ನಿರ್ಮೂಲನೆ ಮಾಡಿ ಆರೋಗ್ಯಕರ ತಾಯಿ ಮಗುವಿನ ಸಮಾಜ ನಿರ್ಮಿಸಲು ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ || ಆರ್ . ಸೆಲ್ವಮಣಿ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಜಿಲ್ಲಾಡಳಿತ , ಜಿಲ್ಲಾಪಂಚಾಯತ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೋಲಾರ , ಸ್ಪಿರುಲಿನ್ ಫೌಂಡೇಶನ್ , ತುಮಕೂರು ಹಾಗೂ ಬಿ.ಹೆಚ್.ಇ.ಎಲ್ , ಬೆಂಗಳೂರು ರವರ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಪೋಷಣ್ ಮಾಸಾಚರಣೆ ಅನ್ವಯ ಸಸಿ ನೆಡುವ ಕಾರ್ಯಕ್ರಮ , ತೀವ್ರ ಅಪೌಷ್ಟಿಕ ಮಕ್ಕಳಿಗೆ ಸ್ಪಿರುಲಿನಾ ಪೌಂಡೇಶನ್ ವತಿಯಿಂದ ಚಿಕ್ಕಿ ವಿತರಣೆ ಮತ್ತು ಬಿ.ಎಚ್.ಇ.ಎಲ್ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಮಾಸ್ ಮತ್ತು ಸ್ಯಾನಿಟೈಸರ್ ವಿತರಣಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 2000 ಮಕ್ಕಳು ಅಪೌಷ್ಟಿಕತೆ ಮತ್ತು 100 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಅವರಿಗೆ ಉತ್ತಮ ಪೌಷ್ಠಿಕ ಆಹಾರವನ್ನು ನೀಡಿ ಅಪೌಷ್ಟಿಕತೆಯಿಂದ ಹೊರತಂದು ಸಮಾಜದ ಮುಖ್ಯವಾಹಿನಿಗೆ ತರಬೇಕು. ಅಂಗನವಾಡಿ ಕಾರ್ಯಕರ್ತೆಯರು ಗರ್ಭಿಣಿಯರನ್ನು ಮೊದಲನೇ ಅಥವಾ ಎರಡನೇ ತ್ರೈಮಾಸಿಕದಲ್ಲಿ ಗುರುತಿಸಿ ನೋಂದಾಯಿಸಬೇಕು. ಅವರಿಗೆ ಉತ್ತಮ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸಲು ಅನುಕೂಲವಾಗುತ್ತದೆ.
ಗರ್ಭಿಣಿಯರು ಪೌಷ್ಟಿಕಾಂಶವುಳ್ಳ ಆಹಾರವನ್ನು ಸೇವಿಸಿದರೆ ಸೇವಿಸಿ ಆರೋಗ್ಯವಂತ ಮಗು ಜನಿಸಿದರೆ ಒಳ್ಳೆಯ ಸಮುದಾಯ ಕಟ್ಟಲು ಸಾಧ್ಯ ಪೋಷಣ ಅಭಿಯಾನದ ಮೂಲಕ ಗರ್ಭಿಣಿಯರಿಗೆ ಹಾಗೂ ಬಾಲಂತಿಯರಿಗೆ ಅಪೌಷ್ಟಿಕತೆಯ ಬಗ್ಗೆ ಅರಿವು ಮೂಡಿಸಬೇಕು ಎಂದು ಅವರು ತಿಳಿಸಿದರು. ಸಂಭವನೀಯ ಕರೋನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಬಿ.ಎಚ್.ಇ.ಎಲ್ . ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿರುವ ಮಾಸ್ , ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಯಾನ್ಗಳನ್ನು ಸದ್ಬಳಕೆ ಮಾಡಿಕೊಂಡು ಅಂಗನವಾಡಿ ಹಂತದಲ್ಲೇ ಕರೋನು ಮೂರನೇ ಅಲೆಯನ್ನು ನಿಯಂತ್ರಿಸಲು ಸಹಕರಿಸಬೇಕು ಎಂದು ಅವರು ತಿಳಿಸಿದರು.
ಸ್ಪಿರುಲಿನಾ ಫೌಂಡೇಶನ್ ಪ್ರದಾನ ಸಲಹೆಗಾರರಾದ ಡಾ || ಸಿ.ಎಸ್.ಕೇದಾರ್ ಅವರು ಮಾತನಾಡಿ ಮಕ್ಕಳಿಗೆ ಗರ್ಭದಲ್ಲಿರುವಾಗಿಂದ ಸಾವಿರ ದಿನಗಳ ಕಾಲ ಮದುಳು ಬೆಳೆಯುತ್ತದೆ. ಆ ಸಂದರ್ಭದಲ್ಲಿ ತಾಯಿ ಮತ್ತು ಮಗುವಿಗೆ ಉತ್ತಮ ಪೌಷ್ಠಿಕ ಆಹಾರ ನೀಡಬೇಕು.
ಮಕ್ಕಳಿಗೆ ಹೆಚ್ಚಿನ ಪೌಷ್ಟಿಕ ಆಹಾರ ನೀಡಿದರೆ ಅಪೌಷ್ಠಿಕತೆ ನಿರ್ಮೂಲನೆಯಾಗುತ್ತದೆ. ಕಡಿಮೆ ಆಹಾರ ತಿಂದರು ಹೆಚ್ಚಿನ ಶಕ್ತಿ ನೀಡುವಂತೆ ಆಹಾರ ಸೇವಿಸಬೇಕು. ಮಕ್ಕಳಲ್ಲಿ ಅಪೌಷ್ಟಿಕತೆ ನಿರ್ಮೂಲನೆ ಮಾಡುವ ಉದ್ದೇಶದಿಂದ ಸ್ಪಿರುಲಿನಾ ಫೌಂಡೇಶನ್ ಸ್ಪಿರಿನ್ ಅನ್ನು ಮಕ್ಕಳಿಗೆ ನೀಡುತ್ತಿದೆ. ಪ್ರಪಂಚದಲ್ಲಿ 2 ನೇ ಹೆಚ್ಚು ಸ್ಪಿರಿನ್ ಉತ್ಪಾದನೆ ಭಾರತ ದೇಶದಲ್ಲಿ ಮಾಡಲಾಗುತ್ತಿದೆ.
ಸ್ಪಿರಿನ್ಸ್ ಅನ್ನು ಹಳ್ಳಿಗಳಲ್ಲಿ ಸ್ವಂತವಾಗಿ ತಯಾರಿಸಬಹುದು ಅವರಿಗೆ ಫೌಂಡೇಶನ್ ವತಿಯಿಂದ ತರಬೇತಿ ಹಾಗೂ ಮಾಹಿತಿಯನ್ನು ನೀಡಲಾಗುವುದು . ರಾಷ್ಟ್ರದಲ್ಲಿ 7 ಲಕ್ಷ ಮಕ್ಕಳು ಸ್ಪಿರಿನ್ ಉತ್ಪಾದನೆಗಳನ್ನು ಸೇವಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.
ಬಿ.ಎಚ್.ಇ.ಎಲ್.ನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾದ ಬಿ.ಜಾರ್ಜ್ ಅವರು ಮಾತನಾಡಿ ಸಿ.ಎಸ್.ಆರ್. ಅನುದಾನದಲ್ಲಿ ಬೆಂಗಳೂರು ನಗರ , ಗ್ರಾಮಾಂತರ , ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ . ಕೆಲವು ಪ್ರದೇಶಗಳಲ್ಲಿ ಅಂಗನವಾಡಿ ಕಟ್ಟಡ , ಶಾಲೆಗಳ ನಿರ್ಮಾಣ ಮಾಡಲಾಗಿದೆ. ಕೌಶಲ್ಯ ತರಬೇತಿ ಆರೋಗ್ಯ ಕ್ಯಾಂಪ್ಗಳನ್ನು ಆಯೋಜಿಸಲಾಗಿದೆ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುತ್ತಿರುವ ಮಾಸ್ಟ್ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಮಾನ್ಗಳಿಂದ ಕರೋನಾ ತುರ್ತು ಸಂದರ್ಭದಲ್ಲಿ ತಾಯಿ ಮಕ್ಕಳ ರಕ್ಷಣೆಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಬಿ.ಹೆಚ್.ಇ.ಎಲ್ , ಉಪ ಪ್ರಧಾನ ವ್ಯವಸ್ಥಾಪಕರಾದ ಜೆ.ಜಾನ್ ಆಂಬೂಸ್ , ಸ್ಪಿರುಲಿನ ಫೌಂಡೇಷನ್ ಅಧ್ಯಕ್ಷರಾದ ಮಹೇಶ್ ಆರ್.ವಿ , ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ವಿ.ಮುನಿರಾಜು , ಉಪ ವಿಭಾಗಧಿಕಾರಿಗಳಾದ ಅನಂದ್ ಮೀನಾ ಪ್ರಕಾಶ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎಂ.ಜಿ.ಪಾಲಿ , ಜಿಲ್ಲಾ ಶಿಶು ಅಭಿವೃದ್ಧಿ ಅಧಿಕಾರಿಗಳಾದ ರಮೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.