(www.vknewes.com) : ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಘಟಕದ ವತಿಯಿಂದ ರಾಜ್ಯ ಸರಕಾರಕ್ಕೆ ಈ ಮೂಲಕ ಒತ್ತಾಯಿಸುವುದೇನೆಂದರೆ ರಾಜ್ಯದಲ್ಲಿ ಕೋವಿಡ್ ಮಹಾಮಾರಿಗೆ ಬಲಿಯಾದ ಬಿಪಿಎಲ್ ಕಾರ್ಡ್ ಸದಸ್ಯರ ಕುಟುಂಬಗಳಿಗೆ ಕೂಡಲೇ ಪರಿಹಾರ ಮತ್ತು ಬಿಡುಗಡೆ ಮಾಡಬೇಕು.
ಪರಿಹಾರ ಘೋಷಣೆ ಮಾಡಿ ಎರಡು ತಿಂಗಳಾದರೂ ಸರಕಾರದಿಂದ ಯಾವುದೇ ಪರಿಹಾರ ವಿತರಣೆ ಆಗದಿರುವುದು ವಿಷಾದನೀಯ. ಮಹಾಮಾರಿಗೆ ಮನೆಯ ಸದಸ್ಯರನ್ನು ಕಳೆದುಕೊಂಡ ಸಾವಿರಾರು ಕುಟುಂಬಗಳು ಆರ್ಥಿಕ ಸಂಕಷ್ಟದಿಂದ ಬಳಲುತ್ತಿವೆ.
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಸದಸ್ಯರು ಮಹಾಮಾರಿಗೆ ಸಾವನ್ನಪ್ಪಿದ್ದರೆ ಅಂತಹ ಕುಟುಂಬಗಳಿಗೆ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸಿ ಹಿಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಆದೇಶಿಸಿದ್ದರು. ಆದೇಶ ಹೊರಡಿಸಿ ಎರಡು ತಿಂಗಳಾದರೂ ಇದುವರೆಗೂ ಫಲಾನುಭವಿಗಳಿಗೆ ಮಾತ್ರ ಸರಕಾರದ ಪರಿಹಾರ ಸಿಗದೇ ಇರುವುದು ಖಂಡನೀಯ.
ಕೂಡಲೇ ಆಯಾ ಜಿಲ್ಲಾಡಳಿತ ತಮ್ಮ ವ್ಯಾಪ್ತಿಯಲ್ಲಿ ಸಮೀಕ್ಷೆ ಮಾಡಿ ಸರಕಾರಕ್ಕೆ ವರದಿ ಸಲ್ಲಿಸುವ ಜೊತೆಗೆ ನೊಂದ ಕುಟುಂಬಗಳಿಗೆ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸುತ್ತೇವೆ.
ರೈತರಿಗೆ ನೆರೆ ಪರಿಹಾರ ಎನ್ನುವುದು ಕೈಗೆ ಸಿಗದ ಮಾಯಾಜಿಂಕೆಯಾಗಿದೆ. ಪ್ರತಿ ವರ್ಷದ ನೆರೆಯಲ್ಲೂ ಕೇಂದ್ರದಿಂದ ಅಧ್ಯಯನ ತಂಡ ಬರುತ್ತದೆಯೇ ಹೊರತು ಪರಿಹಾರ ಮಾತ್ರ ಬಿಡಿಗಾಸು ಸಿಗ್ತಿಲ್ಲ ಅಂತಾ ಅನ್ನದಾತರು ಅಳಲುತೊಡಿಕೊಳ್ಳುತ್ತಿದ್ದಾರೆ.
ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಕೇಂದ್ರ ಅಧ್ಯಯನ ತಂಡ ಆಗಮಿಸಿ, ಸಮೀಕ್ಷೆ ನಡೆಸಿದ್ದಾರೆ. ಅಷ್ಟೇ ಅಲ್ಲ ಮೂರು ತಿಂಗಳಿಗೆ ಆರು ತಿಂಗಳಿಗೆ ಅಧ್ಯಯನ ತಂಡದವರು ಬಂದು ಸಮೀಕ್ಷೆ ನಡೆಸುತ್ತಾರೆ. ಹೋಗ್ತಾರೆ. ಆದರೆ ಇದುವರೆಗೂ ಅನ್ನದಾತರಿಗೆ ನಯಾ ಪೈಸೆಯೂ ಸಹ ಬಿಡುಗಡೆಯಾಗಿಲ್ಲ.
ನಷ್ಟ ಪರಿಹಾರ ಬಿಡುಗಡೆಯಾಗಿಲ್ಲ ಎಂದ ಮೇಲೆ ಯಾವ ಪುರುಷಾರ್ಥಕ್ಕೆ ನೆರೆ ಪ್ರವಾಹ ಸಮೀಕ್ಷೆ ನಡೆಸುತ್ತಿರಾ ಸ್ವಾಮಿ..?
ಇತ್ತಿಚೇಗೆ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರ ವಹಿಸಿಕೊಂಡು ನಂತರ ನೆರೆ ಪ್ರವಾಹ ಸಂತ್ರಸ್ತರಿಗೆ 10 ಸಾವಿರ ತುರ್ತು ಪರಿಹಾರ ಘೋಷಿಸಿದರು. ಆದರೆ ಇದು ಘೋಷಣೆಯಾಗಿಯೇ ಉಳಿದಿದೆ ಹೊರತು, ಕಾರ್ಯರೂಪಕ್ಕೆ ಇನ್ನು ಬಂದಿಲ್ಲ.
ಗದಗ-ಬೆಟ್ಟಿಗೇರಿ ನಗರಸಭೆ ಚುನಾವಣೆಯಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ( ಡಬ್ಲ್ಯೂ ಪಿ ಐ) ಪಕ್ಷದಿಂದ ನಗರದ 35 ವಾರ್ಡಗಳ ಪೈಕಿ 11 ವಾರ್ಡಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಲಾಯಿತು.
ಮೌಲ್ಯಾಧಾರಿತ ರಾಜಕೀಯ ಮಾದರಿಯಾಗಿ ಸೇವೆಯ ಮೂಲಕ ಡಬ್ಲುಪಿಐ ಕೆಲಸ ಮಾಡುತ್ತಿದೆ. ಹಲವಾರು ನಗರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಯಲ್ಲಿ ನಮ್ಮ ಸದಸ್ಯರಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲೂ ಸಹ ನಮ್ಮ ಪಕ್ಷ ಸ್ಪರ್ಧೆ ಮಾಡುವುದು.ಮೌಲ್ಯಾಧಾರಿತ ರಾಜಕಾರಣದ ಅವಶ್ಯಕತೆ ಇದೆ. ಜನತೆ ನೈತಿಕ ರಾಜಕಾರಣವನ್ನು ಬೆಂಬಲಿಸಬೇಕು.
ಈ ಸಂದರ್ಭದಲ್ಲಿ ತಾಹಿರ್ ಹುಸೇನ್(ರಾಜ್ಯಾಧ್ಯಕ್ಷರು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ), ಅಜೀಜ್ ಜಾಗಿರ್ದಾರ್ (ರಾಜ್ಯ ಮಾಧ್ಯಮ ಕಾರ್ಯದರ್ಶಿ ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ), ಜುನೈದ್ ಉಮಚಗಿ(ಜಿಲ್ಲಾಧ್ಯಕ್ಷರು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಗದಗ) ಉಪಸ್ಥಿತರಿದ್ದರು.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.