ಉಡುಪಿ: ಹೊಸ ರಾಷ್ಟ್ತ್ರೀಯ ಶಿಕ್ಷಣ ನೀತಿ ವಿರೋಧಿಸಿ ಬೆಂಗಳೂರುನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೋಲೀಸ್ ದೌರ್ಜನ್ಯವನ್ನು ಖಂಡಿಸಿ ಹಾಗೂ ಪ್ರಕರಣವನ್ನ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ಅಸೀಲ್ ಅಕ್ರಮ್ ಮಾತನಾಡಿ ಲಾಠಿ ಏಟಿನ ಮೂಲಕ ವಿದ್ಯಾರ್ಥಿ ಹೋರಾಟವನ್ನು ಹತ್ತಿಕ್ಕುವ ಫ್ಯಾಶಿಸ್ಟ್ ಸರ್ಕಾರದ ಪ್ರಯತ್ನವು ಮೂರ್ಖತನವಾಗಿದೆ. NEP ವಿರುದ್ಧವಾಗಿ ನಮ್ಮ ಹೋರಾಟವು ಇನ್ನಷ್ಟು ಶಕ್ತಗೊಳ್ಳಲಿದೆ ಎಂದು ಹೇಳಿದರು ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಖಂಡ ಝಮ್ ಝಮ್, ಉಡುಪಿ ಜಿಲ್ಲಾ ಉಪಾಧ್ಯಕ್ಷ ಸಾದಿಕ್ ಕಾರ್ಕಳ, ಸದಸ್ಯರಾದ ಅರ್ಫಾಜ್, ಸಫ್ಯಾನ್ ಮತ್ತು ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಕ್ಯಾಂಪಸ್ ಫ್ರಂಟ್ ಉಡುಪಿ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.