ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಬೆಂಗಳೂರಿನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೋಲೀಸ್ ದೌರ್ಜನ್ಯವನ್ನು ಖಂಡಿಸಿ ಹಾಗೂ ವಿದ್ಯಾರ್ಥಿಗಳ ಮೇಲಿನ ಪ್ರಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರಾಸ್ತಾವಿಕ ಭಾಷಣ ಮಾಡಿದ ಜಿಲ್ಲಾ ಕಾರ್ಯದರ್ಶಿಯಾದ ಮುಸ್ತಾಫಾ ಕೊಡಿಪ್ಪಾಡಿ ಮಾತನಾಡಿ ಮುನ್ನೆ ಬೆಂಗಳೂರಿನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಗಳು ನಿಮ್ಮ ಬೂಟು ಏಟುಗಳು ಏನೇ ಮಾಡಿದರು ನಮ್ಮಯ ಈ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.
ಬಂಟ್ವಾಳ ತಾಲೂಕು ಅಧ್ಯಕ್ಷರಾದ ಅಶ್ಫಾಕ್ ಬಂಟ್ವಾಳ್ ಮಾತನಾಡಿ ನಮ್ಮ ಹೋರಾಟವನ್ನು ಲಾಠಿಗಳಿಂದ ಅಥವಾ ಬೂಟುಗಾಲಿನಿಂದ ತಡೆಯಲು ಸಾಧ್ಯವಾಗದು. NEP ಹಿಂಪಡೆಯುವವರೆಗೂ ನಮ್ಮ ಹೋರಾಟವನ್ನು ಮುಂದುವರಿಸಲಿದ್ದೇವೆ ಎಂದು ಹೇಳಿದರು.
ಪೊಲೀಸರೊಂದಿಗೆ ಮಾತಿನ ಚಕಮಕಿ
ಈ ವೇಳೆ ಪ್ರತಿಭಟನೆಯನ್ನು ತಡೆಯಲು ಬಂದ ಪೊಲೀಸರ ಮತ್ತು ವಿದ್ಯಾರ್ಥಿಗಳ ಮಧ್ಯೆ ಮಾತಿನ ಚಕಮಕಿ ನಡೆಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾಧ್ಯಕ್ಷರಾದ ಅನ್ಸಾರ್ ಬೆಳ್ಳಾರೆ, ಸದಸ್ಯರಾದ ಶಮ್ಮಾಶ್ ಬನ್ನೂರು, ಫಾರೂಕ್ ಕಟ್ಟತ್ತಾರ್, ಸಂಟ್ಯಾರ್ ಏರಿಯಾ ಅಧ್ಯಕ್ಷರಾದ ಆರಿಫ್ ಬೆಟ್ಟಪಾಡಿ, ಕಾರ್ಯದರ್ಶಿ ಸಫೀರ್ ಕಲ್ಲಾರ್ಪೆ, ಪುತ್ತೂರು ಸಿಟಿ ಏರಿಯಾ ಕಾರ್ಯದರ್ಶಿ ಅಪ್ರಾಜ್ ಪರ್ಲಡ್ಕ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಫಾರೂಕ್ ಕಬಕ ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.