(www.vknews.in)
ಸರಕಾರಿ ಶಾಲೆ ಉಳಿಯಲಿ ಬೆಳೆಯಲಿ ನೆರೆಹೊರೆಯ ಸಮಾನ ಶಾಲೆಗಳಾಗಲಿ
ದಿನಾಂಕ 21.09.2021 ಮಂಗಳವಾರ ಬೆಳಗ್ಗೆ 10 ಗಂಟೆಗೆ ಗ್ರಾಮ ಪಂಚಾಯತ್ ಹೊಸಂಗಡಿ, ಪೆರಿಂಜೆ ಇಲ್ಲಿನ ಸಭಾಭವನದಲ್ಲಿ ” *ಹೊಸಂಗಡಿ ಪಂಚಾಯತ್* ಮಟ್ಟದ ಸರಕಾರಿ ಶಾಲೆಗಳ ಎಸ್.ಡಿ.ಎಂ.ಸಿ ಸದಸ್ಯರಿಗೆ” ಹಾಗೂ ಆಸಕ್ತ ಪೋಷಕರಿಗೆ ಎಸ್.ಡಿ.ಎಂ.ಸಿ. ಸಮನ್ವಯ ವೇದಿಕೆ ಬೆಳ್ತಂಗಡಿ ಇದರ ಸಹಯೋಗದಲ್ಲಿ *ತರಬೇತಿ ಕಾರ್ಯಾಗಾರ* ಹಾಗೂ ಪಂಚಾಯತ್ ಸಮಿತಿ ರಚನೆ ಕಾರ್ಯಕ್ರಮವು ನಡೆಯಿತು ಸಭಾಧ್ಯಕ್ಷತೆಯನ್ನು ಹೊಸಂಗಡಿ ಪಂಚಾಯತ್ ಅಧ್ಯಕ್ಷರಾದ ಶ್ರೀ ಕರುಣಾಕರ ಪೂಜಾರಿ ವಹಿಸಿದ್ದರು. ಉದ್ಘಾಟನೆ ಯನ್ನು ಸಾಮಾಜಿಕ ಮುಂದಾಳು ಶ್ರೀ ಪ್ರತೀಶ್ ನೆರವೇರಿಸಿದರು. ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆಯ ಜಿಲ್ಲಾಧ್ಯಕ್ಷರಾದ ಶ್ರೀ ಇಸ್ಮಾಯಿಲ್ ನೆಲ್ಯಾಡಿ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಗಣೇಶ್ ಶೆಟ್ಟಿ, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ನಾಗರತ್ನ ಇವರುಗಳು ಉಪಸ್ಥಿತರಿದ್ದು ಮಾತನಾಡಿ ಶುಭ ಹಾರೈಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಉದ್ಘಾಟನೆಯ ಬಳಿಕ ಬೆಳ್ತಂಗಡಿ ತಾಲೂಕು ಎಸ್.ಡಿ.ಎಂ.ಸಿ ಸಮನ್ವಯ ವೇದಿಕೆ ಅಧ್ಯಕ್ಷರಾದ ಶ್ರೀ ರಮೇಶ್ ಶೆಟ್ಟಿ ಪಡ್ಡಂದಡ್ಕ ಇವರು ಮಾಹಿತಿ ಕಾರ್ಯಾಗಾರ ವನ್ನು ನಡೆಸಿಕೊಟ್ಟರು. ಜಿಲ್ಲಾ ಪ್ರತಿನಿಧಿಗಳಾದ ಹರೀಶ್ ಅರಂಬೋಡಿ, ಉಮ್ಮರ್ ಕೊಕ್ಕಡ ರವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹೊಸಂಗಡಿ ಪಂಚಾಯತ್ ವ್ಯಾಪ್ತಿಯ ಕಮಿಟಿಯ ರಚನೆ ಮಾಡಲಾಯಿತು. ಕಾರ್ಯಕ್ರಮದ ನಿರೂಪಣೆ, ಸ್ವಾಗತ ಹಾಗೂ ಧನ್ಯವಾದವನ್ನು ಬೆಳ್ತಂಗಡಿ ತಾಲೂಕು ಎಸ್.ಡಿ.ಎಂ.ಸಿ ಸಮನ್ವಯ ಸಮಿತಿಯ ಕಾರ್ಯದರ್ಶಿ ಹಾಗೂ ಜಿಲ್ಲಾ ಸಮಿತಿಯ ಕೋಶಾಧಿಕಾರಿ ಚಂದ್ರಶೇಖರ್ ಕೊಂಕಣಾಜೆಯವರು ನಿರ್ವಹಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.