ಶಾರ್ಜಾ(ವಿಶ್ವಕನ್ನಡಿಗ ನ್ಯೂಸ್): ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ ಸ.ಅ ರವರ 1494ನೇ ಜನ್ಮ ದಿನದ ಪ್ರಯುಕ್ತ, “ಹಬೀಬ್ (ಸ.ಅ.) ನಮ್ಮ ಜತೆಗಿರಲಿ” ಎಂಬ ಘೋಷವಾಕ್ಯದೊಂದಿಗೆ, ದಿನಾಂಕ 22-11-19 ರಂದು ಶುಕ್ರವಾರ ಸಂಜೆ 6 ಗಂಟೆಗೆ ಶಾರ್ಜಾದ ಖಾಸಿಮಿಯಾದಲ್ಲಿರುವ ರಯಾನ್ ಹೋಟೆಲಿನಲ್ಲಿ ಗ್ರ್ಯಾಂಡ್ ಮೀಲಾದ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಕೆ.ಸಿ.ಎಫ್ ಶಾರ್ಜಾ ವಲಯದ ಅಧ್ಯಕ್ಷರಾದ ಬಹು! ಅಬೂಸ್ವಾಲಿಹ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ, ಕೆ.ಸಿ.ಎಫ್ ಯು.ಎ.ಇ. ಶಿಕ್ಷಣ ವಿಭಾಗದ ಅಧ್ಯಕ್ಷರಾದ ಇಬ್ರಾಹಿಂ ಸಖಾಫಿಯವರು ದುಆ ನೆರವೇರಿಸಲಿದ್ದಾರೆ. ಕೆ.ಸಿ.ಎಫ್ ರಾಷ್ಟ್ರೀಯ ಸಮಿತಿ ಯು.ಎ.ಇ ಇದರ ಅಧ್ಯಕ್ಷರಾದ ಬಹು! ಅಬ್ದುಲ್ ಜಲೀಲ್ ನಿಝಾಮಿಯವರು ಸಮಾರಂಭದ ಉದ್ಘಾಟನೆಗೈಯಲಿದ್ದು, ಮೀಲಾದ್ ಸ್ವಾಗತ ಸಮಿತಿಯ ಅಧ್ಯಕ್ಷರಾದ ಯು.ಟಿ. ನೌಶದ್ ರವರು ಸ್ವಾಗತ ಭಾಷಣ ಮಾಡಲಿದ್ದಾರೆ. ಕೆ.ಸಿ.ಎಫ್ ಶಾರ್ಜಾ ವಲಯ ಸಮಿತಿಯ ಪ್ರಧಾನ ಕಾರ್ಯದರ್ಶಿ ರಜಬ್ ಮುಹಮ್ಮದ್ ಉಚ್ಚಿಲ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.
ಬಹುಮಾನ್ಯ ಬದ್ರುಸ್ಸಾದಾತ್ ಅಸ್ಸಯ್ಯಿದ್ ಇಬ್ರಾಹಿಮ್ ಖಲೀಲ್ ಅಲ್ ಬುಖಾರಿ ತಂಙಲ್ ರವರು ಮುಖ್ಯ ಅತಿಥಿಯಾಗಿ ಆಗಮಿಸಿ ದುಆಕ್ಕೆ ನೇತೃತ್ವ ನೀಡಲಿದ್ದಾರೆ. ಬಹು! ಮಸ್ಊದ್ ಸಖಾಫಿ ಗೂಡಲ್ಲೂರು ರವರು ಹುಬ್ಬುರಸೂಲ್ ಮುಖ್ಯ ಭಾಷಣ ಮಾಡಲಿದ್ದಾರೆ.
ಸಮಾರಂಭದಲ್ಲಿ ಶಾರ್ಜಾ ಝೋನ್ ತಂಡದಿಂದ ಆಕರ್ಷಕ ದಫ್ ಪ್ರದರ್ಶನ, ಮೌಲಿದ್ ಪಾರಾಯಣ, ಮನಮೋಹಕ ಬುರ್ದಾ ಆಲಾಪನೆ, ನಾತೇ ಶರೀಫ್ ನಡೆಯಲಿದ್ದು, ಸಮಾರಂಭದಲ್ಲಿ ಕೆ.ಸಿ.ಎಫ್ ಅಂತರಾಷ್ಟ್ರೀಯ ನೇತಾರರು, ಉಮಾರಾ ನಾಯಕರು, ಉಲಮಾಗಳು ಭಾಗವಹಿಸುವುದಾಗಿ ಸ್ವಾಗತ ಸಮಿತಿ ನೇತಾರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ರಿಕಾ ಗೋಷ್ಠಿಯಲ್ಲಿ ಬಹು ನೌಶಾದ್ ಯು.ಟಿ.(ಅಧ್ಯಕ್ಷರು ಮೀಲಾದ್ ಸ್ವಾಗತ ಸಮಿತಿ ), ಬಹು ಅಬೂಸ್ವಾಲಿಹ್ ಸಖಾಫಿ (ಕೆ.ಸಿ.ಎಫ್ ಶಾರ್ಜ ಝೋನ್ ಅಧ್ಯಕ್ಷರು), ಬಹು ರಜಬ್ ಮಹಮ್ಮದ್ (ಕೆ.ಸಿ.ಎಫ್ ಶಾರ್ಜ ಝೋನ್ ಪ್ರಧಾನ ಕಾರ್ಯದರ್ಶಿ),ಬಹು ಮುಹಮ್ಮದ್ ಹುಸೈನ್ ಇನೋಳಿ (ಕಾರ್ಯದರ್ಶಿ, ಕೆ.ಸಿ.ಎಫ್ ಶಾರ್ಜ ಝೋನ್ ಮೀಲಾದ್ ಸ್ವಾಗತ ಸಮಿತಿ), ಬಹು ಕರೀಂ ಮುಸ್ಲಿಯಾರ್ (ಅಧ್ಯಕ್ಷರು , ಪ್ರಕಾಶನ ವಿಭಾಗ ಕೆ.ಸಿ.ಎಫ್ ಯು.ಎ.ಈ), ಬಹು ತಾಜುದ್ಧೀನ್ ಅಮ್ಮುಂಜೆ (ಅಧ್ಯಕ್ಷರು ಮೀಡಿಯಾ ಸಮಿತಿ , ಮೀಲಾದ್ ಸ್ವಾಗತ ಸಮಿತಿ) ಇವರುಗಳು ಭಾಗವಹಿಸಿದ್ದರು.
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.