ಬೆಂಗಳೂರು(www.vknews.in): ರಾಜ್ಯಾದ್ಯಂತ ಹೆಚ್ಚುತ್ತಿರುವ ಕೊರೊನಾ ವೈರಸ್ ನ್ನು ನಿಯಂತ್ರಿಸುವ ಪ್ರಯತ್ನವಾಗಿ ರಾಜ್ಯ ಸರಕಾರವು ಪ್ರಾಥಮಿಕ ಶಾಲಾ ಮಕ್ಕಳ ಎಲ್ಲಾ ಪರೀಕ್ಷೆಗಳನ್ನು ಮಾರ್ಚ್ 23ರೊಳಗೆ ಮುಗಿಸುವಂತೆ ನಿರ್ದೇಶಿದೆ. ಈ ಆದೇಶದ ಪ್ರಕಾರ 1 ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾರ್ಚ್ 15 ರೊಳಗೆ ಹಾಗೂ 6ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾರ್ಚ್ 23 ರೊಳಗೆ ವಾರ್ಷಿಕ ಪರೀಕ್ಷೆಯನ್ನು ಮುಗಿಸಿ ತದನಂತರ ಮಕ್ಕಳಿಗೆ ರಜೆ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ನಿರ್ದೇಶಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.