ಚಿಕ್ಕಬಳ್ಳಾಪುರ(ವಿಶ್ವಕನ್ನಡಿಗ ನ್ಯೂಸ್): ಕೋರೋನಾ ವೈರಸ್ ನಿಂದ ಇಡೀ ದೇಶವೇ ಲಾಕ್ ಡೌನ್ ಆಗಿದ್ದು, ಇದರಿಂದ ಗ್ರಾಮೀಣ ಭಾಗದ ಜನರಿಗೆ ತೊಂದರೆಯಾಗಬಾರದೆಂದು ಕೋಚಿಮಲ್ ನಿರ್ದೇಶಕ ಎನ್.ಸಿ.ವೆಂಕಟೇಶ್ ರವರು ನಲ್ಲಕದಿರೇನಹಳ್ಳಿ, ಮೋಟ್ಲೂರು, ಚಿಕ್ಕನಹಳ್ಳಿ ಗ್ರಾಮದ ನೂರಾರು ಕುಟುಂಬಗಳಿಗೆ ದಿನಸಿ ಪದಾರ್ಥಗಳ ಕಿಟ್ ಅನ್ನು ವಿತರಿಸಿದರು.
ಈ ವೇಳೆ ಮಾತನಾಡಿದ ಎನ್.ಸಿ.ವೆಂಕಟೇಶ್, ಕೋರೋನಾ ವೈರಸ್ ಸೋಂಕಿನ ಆತಂಕಕ್ಕೆ ಇಡೀ ದೇಶವನ್ನು ಲಾಕ್ ಡೌನ್ ಮಾಡಿರುವ ಹಿನ್ನೆಲೆಯಲ್ಲಿ, ಗ್ರಾಮೀಣ ಪ್ರದೇಶದ ಜನರಿಗೆ ಕೆಲಸ ಕಾರ್ಯಗಳಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ನಿಟ್ಟಿನಲ್ಲಿ ಯಾವುದೇ ತರಹದ ತಾರತಮ್ಯವಿಲ್ಲದೆ ಮೊದಲ ಹಂತದಲ್ಲಿ ನಲ್ಲಕದಿರೇನಹಳ್ಳಿ ಸೇರಿದಂತೆ ಸುತ್ತಲಿನ ನಾಲ್ಕು ಗ್ರಾಮಗಳಲ್ಲಿ ದಿನಸಿ ಪದಾರ್ಥಗಳ ಕಿಟ್ ವಿತರಿಸಲಾಗುತ್ತಿದ್ದು, ಹಂತ ಹಂತವಾಗಿ ಪೋಶೆಟ್ಟಿಹಳ್ಳಿ ಗ್ರಾಂ.ಪಂ. ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲೂ ದಿನಸಿ ವಿತರಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಸದಸ್ಯೆ ಭರಣಿ, ಪೋಶೆಟ್ಟಿಹಳ್ಳಿ ಗ್ರಾ.ಪಂ. ಅಧ್ಯಕ್ಷ ಬಾಲಕುಂಟಹಳ್ಳಿ ಮುನಿಯಪ್ಪ, ಲಾಯರ್ ನಾರಾಯಣ ಸ್ವಾಮಿ ಇನ್ನಿತರರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.