ಕುಂದಾಪುರ,(ವಿಶ್ವ ಕನ್ನಡಿಗ ನ್ಯೂಸ್ ): ಮುಂಬೈನಿಂದ ಮಂಡ್ಯಕ್ಕೆ ಲಾರಿಯಲ್ಲಿ ಪ್ರಯಾಣಿಸುತ್ತಿದ್ದ ರೋಗಿಯು ತೆಕ್ಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಇಳಿದು ಅವಾಂತರ ಸ್ರಷ್ಠಿಸಿದ್ದ ಕಥೆಗೆ ಸಂಬಂಧಿಸಿದಂತೆ ಪೆಟ್ರೋಲ್ ಮತ್ತು ಸಾಸ್ತಾನ ಟೋಲ್ ಗೇಟ್ ಸಿಬ್ಬಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಿ ಗಂಟಲ ದ್ರವವನ್ನು ಪರೀಕ್ಷೆಗೆ ಕಳಿಸಲಾಗಿತ್ತು.ಎಲ್ಲಾ 18 ಮಂದಿಯ ವರದಿ ನೆಗೆಟಿವ್ ಬಂದಿದ್ದೂ ,ತಾಲೂಕಿನ ತೆಕ್ಕಟ್ಟೆ ನಿವಾಸಿಗಳು ಸದ್ಯ ನಿರಾಳರಾಗಿದ್ದಾರೆ. ಘಟನೆ ಹಿನ್ನಲೆ :ಕೊರೊನಾ ಸೋಂಕಿತ ಮಂಡ್ಯದ ವ್ಯಕ್ತಿ ಪೆಟ್ರೋಲ್ ಬಂಕ್ ನಲ್ಲಿ ಊಟ, ನಿದ್ದೆ, ಸ್ನಾನ ಮಾಡಿದ್ದ. ಮಾತ್ರವಲ್ಲ, ಸಾಸ್ತಾನ ಟೋಲ್ ಗೇಟ್ ಸಿಬ್ಬಂದಿ ಜೊತೆಗೂ ಸಂಪರ್ಕಕ್ಕೆ ಬಂದಿದ್ದ. ಈ ಘಟನೆಯ ನಂತರ ತೆಕ್ಕಟ್ಟೆಯ ಜನರಲ್ಲಿ ಆತಂಕ ಮನೆಮಾಡಿತ್ತು ಮತ್ತು ಇಲ್ಲಿನ ಪೆಟ್ರೋಲ್ ಬಂಕ್ ಅನ್ನೂ ಸೀಲ್ ಡೌನ್ ಮಾಡಲಾಗಿತ್ತು. ಸದ್ಯ ಎಲ್ಲರ ವರದಿಯೂ ನೆಗೆಟಿವ್ ಆಗಿದ್ದು, ತೆಕ್ಕಟ್ಟೆಯ ಜನ ನಿಟ್ಟುಸಿರು ಬಿಟ್ಟಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.