ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಕನ್ನಡದ ಹಿರಿಯ ಸಾಹಿತಿ, “ನಿತ್ಯೋತ್ಸವ” ಕವಿ ಕೆ.ಎಸ್ ನಿಸಾರ್ ಅಹ್ಮದ್ ಅವರ ನಿಧನಕ್ಕೆ ಪುದು ಗ್ರಾ.ಪಂ ಸದಸ್ಯ, ಮಂಗಳೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಶೀರ್ ಪೇರಿಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡ ನಾಡು, ನುಡಿಯನ್ನು ಪದಗಳಲ್ಲಿ ವರ್ಣಿಸಿ ಕನ್ನಡದ ಹಿರಿಮೆಯನ್ನು ಜಗತ್ತಿಗೆ ಸಾರಿದ ಹಿರಿಯ ಸಾಹಿತಿ, ನಿತ್ಯೋತ್ಸವ ಕವಿ, ಪ್ರಧ್ಯಾಪಕರಾದ ಕೆ.ಎಸ್ ನಿಸಾರ್ ಅಹಮದ್ ಅವರನ್ನು ಕಳೆದುಕೊಂಡಿರುವುದು ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು, ನಂತರ ಮನೆಗೆ ಮರಳಿ ಇಂದು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಅವರ ಆತ್ಮಕ್ಕೆ ಶಾಂತಿ ದೊರಕಲಿ ಮತ್ತು ಅವರ ಅಗಲಿಕೆಯಿಂದ ಹಿತೈಷಿಗಳಿಗೆ, ಕುಟುಂಬ ವರ್ಗಕ್ಕೆ ದೇವರು ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಹಾಶೀರ್ ಅವರು ಹೇಳಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.