ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ನಿತ್ಯೋತ್ಸವ ಕವಿ ಕೆ.ಎಸ್ ನಿಸಾರ್ ಅಹಮ್ಮದ್ ವಿಧಿವಶರಾಗಿದ್ದಾರೆ.ಅವರ ನಿಧನಕ್ಕೆ ವೆಲ್ಫೇರ್ ಪಾರ್ಟಿಯ ರಾಜ್ಯಾದ್ಯಕ್ಷರು ಸಂತಾಪ ಸೂಚಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಭಾನುವಾರ ಅಸ್ತಂಗತರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯದಿಂದ ನಿಸಾರ್ ಅಹಮ್ಮದ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಕೆ.ಎಸ್ ನಿರಾಸ್ ಅಹಮ್ಮದ್ ಅವರ ನಿತ್ಯೋತ್ಸವ ಹಾಡು ಸಾಕಷ್ಟು ಪ್ರಸಿದ್ದಿಗಳಿಸಿದ ಹಾಡಾಗಿದೆ. 1935 ಫೆಬ್ರವರಿ 5 ರಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ಜನಿಸಿದ ಇವರು ಕನ್ನಡ ನಾಡು ನುಡಿಗೆ ಕೊಟ್ಟ ಕೊಡುಗೆ ಅಪಾರ.
1981 ರಾಜ್ಯೋತ್ಸವ ಪ್ರಶಸ್ತಿ , 2008 ರಲ್ಲಿ ಪ್ರದ್ಮಶ್ರೀ ಪ್ರಶಸ್ತಿ ಸೇರಿದಂತೆ ತಮ್ಮ ಸಾಹಿತ್ಯ ಕೃಷಿಗೆ ಸಾಕಷ್ಟು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಇವರಿಗೆ 84 ವರ್ಷ ವಯಸ್ಸಾಗಿತ್ತು. ಇವರ ನಿಧನವು ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ವೆಲ್ಫೇರ್ ಪಾರ್ಟಿಯ ರಾಜ್ಯಾದ್ಯಕ್ಷರಾದ ಶ್ರೀಮಾನ್ ತಾಹಿರ್ ಹುಸೇನ್ ತಿಳಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.