ಚಿಕ್ಕಬಳ್ಳಾಪುರ(ವಿಶ್ವಕನ್ನಡಿಗ ನ್ಯೂಸ್): ಕೊರೊನಾ ವೈರಸ್ (ಕೊವಿಡ್-19) ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗದಿಂದ ಬರುವ ಜನರ ಮೇಲೆ ಹೆಚ್ಚು ನಿಗಾವಹಿಸುವುದರ ಜೊತೆಗೆ ಕಟ್ಟೆಚ್ಚೆರ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಆರ್. ಲತಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಶನಿವಾರ ಕೊವಿಡ್-19 ನಿಯಂತ್ರಣ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಿಂದ ಹೊರಗೆ ಹೊಗುವಂತಹ ಕಾರ್ಮಿಕರು ಹಾಗೂ ಜಿಲ್ಲೆಗೆ ಬರುವಂತಹ ಕಾರ್ಮಿಕರು ಸೇವಾ ಸಿಂಧು ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ತದನಂತರ ಅರ್ಜಿ ಸಲ್ಲಿಸಿದ ಕಾರ್ಮಿಕರನ್ನು ಅವರ ಸ್ಥಳಗಳಿಗೆ ಹಿಂತಿರುಗುಲು ಜಿಲ್ಲಾಡಳಿತ ಅನುಮತಿ ನೀಡಲಾಗುತ್ತದೆ. ಕಾರ್ಮಿಕರು ತೆರೆಳಲು ಕೆ.ಎಸ್.ಆರ್.ಸಿ.ಟಿ ಬಸ್ಸ್ ಅಥವಾ ರೈಲಿನ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ಆದೇಶದಂತೆ ವಲಸೆ ಕಾರ್ಮಿಕರನ್ನು ತಮ್ಮ ವಾಸಸ್ಥಳಗಳಿಗೆ ಹೋಗಲು ಅವಕಾಶ ನೀಡಲಾಗಿದೆ. ಅದೇ ಅಂತರಾಜ್ಯ ಹಾಗೂ ಹೊರ ಜಿಲ್ಲೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಗೆ ಬರುವಂತಹ ಪ್ರತಿಯೊಬ್ಬ ಕಾರ್ಮಿಕರನ್ನು ಕೊವಿಡ್ ತಪಾಸಣೆಗೆ ಒಳಪಡಿಸಲಾಗುವುದು ಹಾಗೂ ಅವರನ್ನು 14 ದಿನಗಳ ಹೊಂ ಕೊರೆಂಟೈನ್ ಮಾಡಿ ನಿಗಾ ವಹಿಸಲಾಗುತ್ತದೆ ಎಂದರು.
ಜಿಲ್ಲೆಗೆ ಬರುವಂತಹ ಕಾರ್ಮಿಕರನ್ನು ಬರಮಾಡಿಕೊಳ್ಳಲು ಹಾಗೂ ಈ ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರನ್ನು ಅವರ ಸ್ಥಳಗಳಿಗೆ ಕಳುಹಿಸಲು ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಕೊರೊಂಟೈನ್ಗೆ ಒಳಪಡಿಸುವ ವ್ಯಕ್ತಿಗಳನ್ನು ನಗರದ ಹಾಸ್ಟಲ್ಗಳಲ್ಲಿ ಇರಿಸಲಾಗುವುದು. ಕಾರ್ಮಿಕರು ಸ್ವಯಂ ಪ್ರೇರಿತರಾಗಿ ಹೊಂ ಕೊರೆಂಟೈನ್ ಇರುವುದಾದರೆ ಜಿಲ್ಲಾಡಳಿತ ಅದಕ್ಕೂ ಅವಕಾಶವನ್ನು ಕಲ್ಪಿಸಲಾಗುತ್ತದೆ ಎಂದು ಹೇಳಿದರು. ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಜವಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕಾಗಿರುತ್ತದೆ. ಇಲ್ಲವಾದರೆ ಈ ಕೊರೊನಾ ವೈರಸ್ ಸರಪಳಿಯನ್ನು ಕಡಿತಗೊಳಿಸಲು ಕಷ್ಟವಾಗುತ್ತದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಉಚಿತ ಬಸ್ ವ್ಯವಸ್ಥೆ ಇರುವುದಿಲ್ಲ ಟಿಕೆಟ್ ಪಡೆದುಕೊಂಡು ತಮ್ಮ ವಾಸ ಸ್ಥಳಗಳಿಗೆ ತೆರಳಬೇಕು. ರಂಜಾನ್ ಹಬ್ಬ ಇರುವುದರಿಂದ ನಗರದ ಕೆಲವೊಂದು ವಾರ್ಡ್ಗಳಲ್ಲಿ ಕೆಲವರು ತಡರಾತ್ರಿ ಗುಂಪುಗೂಡುತ್ತಿರುವ ಕಾರಣ ಆಯಾ ವಾರ್ಡ್ಗಳ ರಸ್ತೆಗಳಲ್ಲಿ ಸಿ.ಸಿ.ಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು. ಸೀಲ್ಡೌನ್ ಆಗಿರು ವಾರ್ಡ್ಗಳಲ್ಲಿ ಅನಾವಶ್ಯಕವಾಗಿ ಓಡಾಡುವ ಜನರ ಮೇಲೆ ಕಟ್ಟು ನಿಟ್ಟಿನ ಕ್ರಮ ಜರುಗಿಸಿ ಜಿಲ್ಲೆಗೆ ಬರುವಂತಹ ಕಾರ್ಮಿಕರ ಸ್ಮಾರ್ಟ್ ಪೋನ್ಗಳಲ್ಲಿ ಆರೋಗ್ಯ ಸೇತು ಆಫ್ಅನ್ನು ಅಳವಡಿಸಿ ಅದನ್ನು ಬಳಸಲು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥನ್ ಕುಮಾರ್ ಮಾತನಾಡಿ, ಚಿಕ್ಕಬಳ್ಳಾಪುರ ನಗರದಲ್ಲಿ ಸೀಲ್ಡೌನ್ ಇರುವುದರಿಂದ ಯಾವುದೇ ಕಾರಣಕ್ಕೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಹಾಗೂ 60 ವರ್ಷದ ಮೇಲ್ಪಟ್ಟ ವ್ಯಕ್ತಿಗಳು ಮನೆಯಿಂದ ಹೊರ ಬರಬಾರದು ಒಂದು ವೇಳೆ ಮನೆಯಿಂದ ಹೊರ ಬಂದರೆ ದಂಡವಿಧಿಸಲಾಗುತ್ತದೆ ಈಗಾಗಲೇ ನಗರದ 31 ವಾರ್ಡ್ಗಳನ್ನು ಸೀಲ್ ಡೌನ್ ಮಾಡಲಾಗಿದ್ದು ಇದರಲ್ಲಿ ವಿಶೇಷವಾಗಿ 4 ವಾರ್ಡ್ಗಳಲ್ಲಿ ಕೊರೋನಾ ಪ್ರಕರಣಗಳು ಕಂಡು ಬಂದಿರುವುದರಿಂದ ಈ ವಾರ್ಡ್ಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಜನರು ಅನವಶ್ಯಕವಾಗಿ ಮನೆಯಿಂದ ಹೊರಗೆ ಬರಬೇಡಿ ಆಯಾ ವಾರ್ಡ್ಗಳಿಗೆ ನೋಡಲ್ ಅಧಿಕಾರಿಗಳು ಹಾಗೂ ಸ್ವಯಂ ಸೇವಕರಿಂದ ಮನೆ ಮನೆಗೆ ಅವಶ್ಯಕ ಸಾಮಾಗ್ರಿಗಳನ್ನು ಕಳುಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರತಿ ಆನಂದ್, ಚಿಕ್ಕಬಳ್ಳಾಪುರ ಕೋವಿಡ್-19 ವಿಶೇಷ ನೋಡಲ್ ಅಧಿಕಾರಿಗಾಳಾದ ಡಾ. ಎನ್.ಬಾಸ್ಕರ್, ಜಿಲ್ಲಾ ಆರೋಗ್ಯಾಧಿಕಾರಿ ಬಿ.ಎಂ. ಯೋಗೇಶ್ ಗೌಡ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.