ಚಿಕ್ಕಬಳ್ಳಾಪುರ(ವಿಶ್ವಕನ್ನಡಿಗ ನ್ಯೂಸ್): ದೇಶದ ಎಲ್ಲೆಡೆ ವ್ಯಾಪಿಸಿರುವ ಕೋರೋನಾ ವೈರಸ್ ಸೊಂಕಿನಿಂದ ಪಾರಾಗಲು ಪ್ರಧಾನಿಯವರು ಇಡೀ ದೇಶವನ್ನು ಲಾಕ್ ಡೌನ್ ಮಾಡಲಾಗಿದ್ದು, ಇದರಿಂದ ಬಡ ಕುಟುಂಬಗಳಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ರೈತರಿಗೆ ತುಂಬಾ ತೊಂದರೆ ಉಂಟಾಗಿದೆ. ಮಾಡಲು ಕೆಲಸವಿಲ್ಲದೇ, ಹಾಕಿದ ಬೆಳೆಗೆ ಸರಿಯಾಗಿ ಬೆಲೆಯಿಲ್ಲದೇ ರೈತರಿಗೆ ಕಷ್ಟದ ಪರಿಸ್ಥಿತಿ ಎದುರಾಗಿದೆ.
ಅದರಂತೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಕೂಡ ಲಾಕ್ ಡೌನ್ ಆಗಿದ್ದು, ಇದರಿಂದ ಗ್ರಾಮೀಣ ಭಾಗದ ಜನರಿಗೆ ಸರಿಯಾಗಿ ದಿನಸಿ ಹಾಗೂ ಆಹಾರ ಪದಾರ್ಥಗಳಿಲ್ಲದೇ ಕಷ್ಟದ ಪರಿಸ್ಥಿತಿ ಎದುರಾಗಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಪೋಶೆಟ್ಟಿಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಬಾಲಕುಂಟಹಳ್ಳಿ ಗ್ರಾಮದ ಗ್ರಾಮಸ್ಥರಿಗೆ ಇಂದು ಒಳ್ಳೆಯ ಗುಣಮಟ್ಟ ಆಹಾರ ಧಾನ್ಯಗಳನ್ನು ಒಳಗೊಂಡ ಆಹಾರ ಕಿಟ್ ಹಾಗೂ ಮಾಸ್ಕ್ ಅನ್ನು ಸುಮಾರು 202 ಬಡ ಕುಟುಂಬಗಳಿಗೆ ಬೆಂಗಳೂರಿನ ವಾಣಿಜ್ಯ ಸಂಸ್ಥೆ ಮತ್ತು ತಮ್ಮ ಸ್ನೇಹಿತರಾದ ಆನಂದ್ ರೆಡ್ಡಿಯವರ ಸಹಯೋಗದೊಂದಿಗೆ ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಪಿ.ಎಲ್.ಡಿ ಬ್ಯಾಂಕ್ನ ನಿರ್ದೇಶಕರಾದ ಬಾಲಕುಂಟಹಳ್ಳಿ ಮುನಿಯಪ್ಪ ರವರು ವಿತರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರೈತರ ನೆರವಿಗೆ ಧಾವಿಸುವಂತೆ ಹಾಗೂ ರೈತರಿಗೆ ಎದುರಾಗಿರುವ ಸಂಕಷ್ಟದಿಂದ ಪಾರು ಮಾಡುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಲಾಗಿದ್ದು, ಸೂಕ್ತ ರೀತಿಯಲ್ಲಿ ಜಿಲ್ಲೆಯ ರೈತರಿಗೆ ಸ್ಪಂದಿಸುವುದಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಿಳಿಸಿದರು ಎಂದು ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಪಿ.ಎಲ್.ಡಿ ಬ್ಯಾಂಕ್ನ ನಿರ್ದೇಶಕರಾದ ಬಾಲಕುಂಟಹಳ್ಳಿ ಮುನಿಯಪ್ಪ ರವರು ತಿಳಿಸಿದರು.
ವಾಣಿಜ್ಯೋದ್ಯಮಿ ಆನಂದ್ ರೆಡ್ಡಿ ಮಾತನಾಡುತ್ತಾ, ಬೆಂಗಳೂರಿನ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕ ಕುಟುಂಬಗಳಿಗೆ ದಿನಸಿ ಪದಾರ್ಥಗಳು ಹಾಗೂ ಊಟ ಉಪಹಾರದ ವ್ಯವಸ್ಥೆಯನ್ನು ನಿರಂತರವಾಗಿ ಮಾಡಲಾಗಿದೆ, ಅದೇ ರೀತಿ ಗ್ರಾಮೀಣ ಭಾಗದ ರೈತ ಕುಟುಂಬಗಳಿಗೆ ನೆರವು ನೀಡಬೇಕು ಎಂಬ ಉದ್ದೇಶದಿಂದ ತಮ್ಮ ಸ್ನೇಹಿತರಾದ ಮುನಿಯಪ್ಪ ರವರ ಸಹಯೋಗದೊಂದಿಗೆ ಬಾಲಕುಂಟಹಳ್ಳಿ ಮೂಲಕ ನೆರವು ಕಾರ್ಯ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹಳ್ಳಿಗಳಿಗೆ ನೆರವು ನೀಡಲಾಗುವುದು ಎಂದು ತಿಳಿಸಿದರು.
ಜಿ.ಪಂ. ಸದಸ್ಯ ಕೆ.ಸಿ. ರಾಜಾಕಾಂತ್, ಕೋಚಿಮಲ್ ನಿರ್ದೇಶಕ ಭರಣಿ ವೆಂಕಟೇಶ್, ಸಮಾಜ ಸೇವಕರಾದ ಆನಚಿದ್ ರೆಡ್ಡಿ, ನಂಜಾರೆಡ್ಡಿ, ದೀಪಕ್ ಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಸಿ.ಲಲಿತಾ, ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಪಿ.ಎಲ್.ಡಿ ಬ್ಯಾಂಕ್ನ ನಿರ್ದೇಶಕರಾದ ಬಾಲಕುಂಟಹಳ್ಳಿ ಮುನಿಯಪ್ಪ, ಶ್ರೀಧರ್, ಜಿ.ವಿ. ಮಂಜುನಾಥ್ ಇನ್ನಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.