ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್) : ಪ್ರಾಣವನ್ನು ಪಣಕ್ಕಿಟ್ಟು ಕೊರೊನಾ ಸೋಂಕು ನಿಯಂತ್ರಣ ಮಾಡಲು ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಸಿಬ್ಬಂದಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ-ದಬ್ಬಾಳಿಕೆ ಮತ್ತು ಹಲ್ಲೆಗಳನ್ನು ಖಂಡಿಸಿ ತಾಲೂಕು ಸರ್ಕಾರಿ ನೌಕರರ ಸಂಘದ ಸದಸ್ಯರು ಮತ್ತು ಆಶಾ ಕಾರ್ಯಕರ್ತರು ತಹಶೀಲ್ದಾರ್ ಹಾಗೂ ಆರಕ್ಷಕ ವೃತ್ತ ನಿರೀಕ್ಷಕರಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದರು.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ,ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ಮೂರ್ತಿ ಅವರ ನೇತೃತ್ವದಲ್ಲಿ ಆಶಾ,ಅಂಗನವಾಡಿ ಕಾರ್ಯಕರ್ತರು ಹಾಗೂ ತಾಲೂಕು ಸರ್ಕಾರಿ ನೌಕರರ ಸಂಘದ ಪ್ರತಿನಿಧಿಗಳು ತಹಶೀಲ್ದಾರ್ ಕೆ.ಅರುಂಧತಿ ಮತ್ತು ಆರಕ್ಷ ವೃತ್ತ ನಿರೀಕ್ಷಕ ಸುರೇಶ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಇತ್ತೀಚಿಗೆ ಆರೋಗ್ಯ ಸಿಬ್ಬಂದಿಗಳ ಮೇಲೆ ನಡೆಯುತ್ತಿರುವ ಹಲ್ಲೆಯ ಘಟನೆಗಳನ್ನು ತೀವ್ರವಾಗಿ ಖಂಡಿಸಿ ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ಮೂರ್ತಿ ಮಾತನಾಡಿ ಕೋವಿಡ್-19 ನಿಯಂತ್ರಣಕ್ಕಾಗಿ ಸರ್ಕಾರದ ಆದೇಶಗಳಂತೆ ಆರೋಗ್ಯ ಇಲಾಖೆಯ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ವಲಸಿಗರು ಅಥವಾ ಪ್ರಯಾಣಿಕರು ಜ್ವರದಿಂದ ಬಳಲುತ್ತಿದ್ದರೇ ವಯೋವೃಧ್ಧರ ಆರೋಗ್ಯಕ್ಕೆ ಸಂಬಂಧಿಸಿದಂತೆ ಸರ್ವೇ ನಡೆಸುತ್ತಿದ್ದಾರೆ ಆದರೇ ಇತ್ತೀಚಿನ ದಿನಗಳಲ್ಲಿ ಗಂಜಿಗುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಬಾಳೆಗುಂಡ್ಲಹಳ್ಳಿ,ಪೂಲಕುಂಟಹಳ್ಳಿ ಹಾಗೂ ಗಂಗನಹಳ್ಳಿ ಗ್ರಾಮದಲ್ಲಿ ಆಶಾ ಕಾರ್ಯಕರ್ತರ ಮೇಲೆ ವಿನಾಕಾರಣ ಜಗಳ ತೆಗೆದು ದೌರ್ಜನ್ಯ ನಡೆಸಿದ್ದಾರೆ ಕೂಡಲೇ ಆರೋಪಿಗಳನ್ನು ಬಂಧಿಸಿ ಡಿಸಾಸ್ಟರ್ ಮ್ಯಾನೇಜ್ಮಂಟ್ ಕಾಯ್ದೆ 2005 ಸೆಕ್ಷನ್ 51 ಮತ್ತು ಸೆಕ್ಷನ್ 188 ಅಡಿಯಲ್ಲಿ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ತಹಶೀಲ್ದಾರ್ ಕೆ.ಅರುಂಧತಿ ಮತ್ತು ಸಿಪಿಐ ಸುರೇಶ್ ಮನವಿಪತ್ರವನ್ನು ಸ್ವೀಕರಿಸಿ ಆರೋಪಿಗಳ ದೌರ್ಜನ್ಯದ ಕುರಿತು ತನಿಖೆ ನಡೆಸಿ ಕಾನೂನು ರೀತಿಯ ಕ್ರಮ ಜರುಗಿಸುತ್ತೇವೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆಯ ಪೌರಾಯುಕ್ತ ತ್ಯಾಗರಾಜ್,ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ತಿನ ಸದಸ್ಯ ಶಶಿಕುಮಾರ್,ತಾಲೂಕು ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಅಕ್ಕಲರೆಡ್ಡಿ,ಟಿ.ಟಿ. ನರಸಿಂಹಪ್ಪ,ಲೋಕೇಶ್,ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ ವಿಶ್ವನಾಥ್,ನಗರಸಭೆಯ ಸಮುದಾಯ ಸಂಘಟನಾಧಿಕಾರಿ ಸುಧಾ,ತಾಲೂಕು ಆಶಾ ಕಾರ್ಯಕರ್ತರ ಸಂಘದ ಅಧ್ಯಕ್ಷೆ ನಂಜಮ್ಮ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಎಂ.ಎ.ತಮೀಮ್ ಪಾಷ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.