(www.vknews.com) : ದಕ್ಷಿಣ ಕನ್ನಡ ಜಿಲ್ಲೆ ಕೊರೋನಾ ಹಾಟ್ಸ್ಪಾಟ್ ಆಗಿರುವ ಹೊರತಾಗಿಯೂ ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ. ಸಡಿಲಿಕೆ ಮಾಡಿದ ಬೆನ್ನಲ್ಲೇ ನಗರದಲ್ಲಿ ನಾಲ್ಕು ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಮಂಗಳೂರಿನಲ್ಲಿ 3 ಜನ ಹಾಗೂ ಬಂಟ್ವಾಳ ದಲ್ಲಿ ಒಬ್ಬರಿಗೆ ದೃಢವಾಗುತ್ತಲೇ ಲಾಕ್ಡೌನ್ ಸಡಿಲಗೊಂಡ ಜಿಲ್ಲೆಯ ಜನ ಮತ್ತಷ್ಟು ಆತಂಕಗೊಳ್ಳುವಂತಾಗಿದೆ ಎಂದು NSUI ಪುತ್ತೂರು ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷ ಝೈನ್ ಆತೂರು ಕಳವಳ ವ್ಯಕ್ತಪಡಿಸಿದರು.
ದ.ಕ. ಜಿಲ್ಲೆಯಲ್ಲಿ ಕೊರೋನ ವೈರಸ್ ನಿಯಂತ್ರಣ ಹಾಗೂ ಸೋಂಕು ಮತ್ತಷ್ಟು ವ್ಯಾಪಕವಾಗಿ ಹರಡುತ್ತಿರುವುದಕ್ಕೆ ಕಾರಣ ಕಂಡು ಹುಡುಕುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದ ಅವರು ಸರಕಾರದ ಪಟ್ಟಿಯಂತೆ ನಮ್ಮ ಜಿಲ್ಲೆ ಆರೆಂಜ್ ವಲಯದಲ್ಲಿದೆ. ಕೊರೋನಮುಕ್ತ ಅಲ್ಲದಿದ್ದರೂ, ಜಿಲ್ಲಾದ್ಯಂತ ಲಾಕ್ಡೌನ್ ನಿಯಮ ಸಡಿಲಿಸಿದ್ದು, ಬೆಳಗ್ಗೆ 7 ರಿಂದ ಸಂಜೆ 7ರವರೆಗೆ ವಾಹನ ಓಡಾಟ, ವ್ಯಾಪಾರ ವಹಿವಾಟುಗಳಿಗೆ ಮತ್ತು ಮದ್ಯದಂಗಡಿ ತೆರೆಯಲು ಅನುಮತಿ ನೀಡಿರುವು ಜಿಲ್ಲೆಯ ಜನರ ಆತಂಕವನ್ನು ಹೆಚ್ಚು ಮಾಡಿದೆ. ಕೂಡಲೇ ಜಿಲ್ಲಾಡಳಿತ ಲೋಕ್ ಡೌನ್ ಸಡಲಿಕೆಯನ್ನು ಹಿಂಪಡೆಯಲಿ ಎಂದು ಆಗ್ರಹಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.