ತುಮಕೂರು: ಕೊರೊನಾ ಯುದ್ಧದ ಹೋರಾಟದಲ್ಲಿ ಸೈನಿಕರಾಗಿ ಸೇವೆ ಸಲ್ಲಿಸುತ್ತಿರುವ ವೈದ್ಯರು, ವೈದ್ಯಕೀಯ ವೃತ್ತಿ ನಿರತರು, ಆಶಾ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿಗಳಂತೆ ಆಂಬುಲೆನ್ಸ್ ಸಿಬ್ಬಂದಿ ಕಾರ್ಯವೂ ಕೂಡ ಶ್ಲಾಘನೀಯ.
ತುಮಕೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿತರು, ಶಂಕಿತರನ್ನು ಜೀವದ ಹಂಗು ತೊರೆದು ಆಸ್ಪತ್ರೆಗೆ ಸಾಗಿಸುವ ಕಾರ್ಯದಲ್ಲಿ ಹಗಲಿರುಳೆನ್ನದೇ ಶ್ರಮಿಸುತ್ತಿದ್ದಾರೆ. ತಮ್ಮ ಮನೆ, ಕುಟುಂಬ ಸದಸ್ಯರನ್ನು ಬಿಟ್ಟು ಕಾರ್ಯನಿರ್ವಹಿಸುತ್ತಿರುವ ಆಂಬುಲೆನ್ಸ್ ಸಿಬ್ಬಂದಿ ಕೊರೊನಾ ಸೋಂಕಿತರು, ಶಂಕಿತರನ್ನು ಆಸ್ಪತ್ರೆಗೆ ಕರೆ ತರುವ ಮೂಲಕ ಸೇವಾಮನೋಭಾವ ಪ್ರದರ್ಶಿಸಿದ್ದಾರೆ. ಜಿವಿಕೆ-ಇಎಂಆರ್ಐನಿಂದ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 108 ಆಂಬುಲೆನ್ಸ್ಗಳ ೩೫ ವಾಹನಗಳು ತುಮಕೂರು ಜಿಲ್ಲೆಯಲ್ಲಿದ್ದು, ಇವುಗಳಲ್ಲಿ 8 ವಾಹನಗಳನ್ನು ಕೊರೊನಾ ಸೋಂಕಿತರು, ಅವರ ಕುಟುಂಬದವರನ್ನು ಕ್ವಾರೆಂಟೈನ್ ಮಾಡಲು, ಆಸ್ಪತ್ರೆ ಸಿಬ್ಬಂದಿಯನ್ನು ಕರೆತರಲು ಬಳಸಿಕೊಳ್ಳಲಾಗುತ್ತಿದೆ.
ಸಮರೋಪಾದಿ ಕಾರ್ಯ:- ಕೊರೊನಾ ಹೋರಾಟದಲ್ಲಿ ತೊಡಗಿಕೊಂಡಿರುವ ಆಂಬುಲೆನ್ಸ್ ಸಿಬ್ಬಂದಿ 2 ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿ ವಾಹನದಲ್ಲಿ ಚಾಲಕ ಹಾಗೂ ಸಹಾಯಕ ನರ್ಸ್ಗಳ ಸುರಕ್ಷತೆಗಾಗಿ ಪಿಪಿಇ ಕಿಟ್, ಮಾಸ್ಕ್, ಸ್ಯಾನಿಟೈಜರ್ ಒಳಗೊಂಡಂತೆ ಸಾಕಷ್ಟು ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ಸೋಂಕಿತರನ್ನು ಕರೆತರುವ ಕಾರ್ಯದಲ್ಲಿ ನಿರತರಾದ ಸಿಬ್ಬಂದಿ ಕಾರ್ಯ ಮುಗಿದ ಬಳಿಕ ಅವರನ್ನು 1 ವಾರಗಳ ಕಾಲ ಪ್ರತ್ಯೇಕವಾಗಿ ಕ್ವಾರೆಂಟೈನ್ನಲ್ಲಿ ಇಡಲಾಗುತ್ತದೆ. ಇದರಿಂದ 108ಆಂಬುಲೆನ್ಸ್ ಸಿಬ್ಬಂದಿಗಳು ತಮ್ಮ ಕುಟುಂಬದವರನ್ನು ಸುಮಾರು 15 ದಿನಗಟ್ಟಲೇ ದೂರವೇ ಉಳಿಯುವಂತಹ ಸ್ಥಿತಿ ಉಂಟಾಗಿದೆ.
ಜಿವಿಕೆಯಿಂದ ಸಿಬ್ಬಂದಿಗೆ ವಿಶೇಷ ತರಬೇತಿ: ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ವೈದ್ಯರೊಂದಿಗೆ ಸಹಕಾರಿಯಾಗಿ ನಿಂತಿರುವ ಆಂಬುಲೆನ್ಸ್ ಸಿಬ್ಬಂದಿಗೂ ಸಹ ವಿಶೇಷ ತರಬೇತಿ ನೀಡಲಾಗಿದೆ. ಸೋಂಕಿತರನ್ನು ಕರೆತರುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ, ತಮ್ಮನ್ನು ತಾವು ರಕ್ಷಣೆ ಮಾಡಿಕೊಂಡು ಸೋಂಕಿತರನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸುವ ಬಗ್ಗೆ ತರಬೇತಿ ನೀಡಲಾಗಿದೆ.
ತಮ್ಮ ಜೀವದ ಹಂಗು ತೊರೆದು ವೈದ್ಯರಿಗೆ ಸಹಕಾರಿಯಾಗಿ ಸೈನಿಕರಂತೆ ಕಾರ್ಯನಿರ್ವಹಿಸುತ್ತಿರುವ ಕೊರೊನಾ ಸೈನಿಕರುಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್, ಡಿಹೆಚ್ಓ ಡಾ|| ಚಂದ್ರಿಕಾ, ಜಿಲ್ಲಾ ಸರ್ಜನ್ ಡಾ|| ವೀರಭದ್ರಯ್ಯ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವೈರಸ್ ಸೋಂಕಿತರು ಹಾಗೂ ಶಂಕಿತರನ್ನು ಚಿಕಿತ್ಸೆ, ಸುರಕ್ಷತಾ ಜಾಗಕ್ಕೆ ಸಾಗಿಸುವಲ್ಲಿ ಆಂಬುಲೆನ್ಸ್ ಸಿಬ್ಬಂದಿಯ ಕಾರ್ಯ ಶ್ಲಾಘನೀಯ. ಕರ್ತವ್ಯ ನಿರ್ವಹಣೆ ಸಮಯದಲ್ಲಿ ಅಳವಡಿಸಿಕೊಳ್ಳಲು ಸಿಬ್ಬಂದಿಗಳಿಗೆ ರಕ್ಷಾ ಕವಚವನ್ನು ನೀಡಲಾಗಿದೆ. ಕ್ವಾರೆಂಟೈನ್ ಸಮಯದಲ್ಲಿ ಉಳಿದುಕೊಳ್ಳಲು ಕೊಠಡಿ, ಊಟ, ಸ್ನಾನ ಇತ್ಯಾದಿ ಮೂಲಭೂತ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಜಿವಿಕೆ ಪ್ರಾದೇಶಿಕ ವ್ಯವಸ್ಥಾಪಕ ಹಫೀಸ್ ಉಲ್ಲಾ ಅವರು ತಿಳಿಸಿದ್ದಾರೆ.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.