ತುಮಕೂರು (www.vknews.com) : ಜಿಲ್ಲೆಯಲ್ಲಿ ಮೂರು ಹೊಸ ಕೋವಿಡ್ 19 ಪ್ರಕರಣಗಳು ಕಂಡುಬಂದಿದ್ದು ಜಿಲ್ಲೆಯ ಜನರ ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.
ಗುಜರಾತಿನ ಅಹಮದಾಬಾದ್ ನಿಂದ ಜಿಲ್ಲೆಯ ಪಾವಗಡಕ್ಕೆ ಆಗಮಿಸಿದ್ದ ಮೂರು ಜನರಲ್ಲಿ ಪಾಸಿಟಿವ್ ಕಂಡುಬಂದಿರುವುದನ್ನು ಖಚಿತಪಡಿಸಿದೆ.
P 792, P 793, P 793 ಪ್ರಕರಣಗಳ ಆಗಿದ್ದು ಒಟ್ಟಾರೆಯಾಗಿ ತುಮಕೂರು ಜಿಲ್ಲೆಯಲ್ಲಿ 11 ಪ್ರಕರಣಗಳು ಕಂಡು ಬಂದಿದ್ದು, ಅದರಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ, ಇಬ್ಬರು ವ್ಯಕ್ತಿಗಳು ಚಿಕಿತ್ಸೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ, ಉಳಿದ ಏಳು ಜನರು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಅಹಮದಾಬಾದಿನಿಂದ ತುಮಕೂರು ಜಿಲ್ಲೆಗೆ 18 ಜನರು ಬಂದಿದ್ದು, ಅದರಲ್ಲಿ ಐದು ಜನರನ್ನು ಆಂಧ್ರಪ್ರದೇಶಕ್ಕೆ ಕಳುಹಿಸಿಕೊಡಲಾಗಿತ್ತು. ಉಳಿದ 13 ಜನರನ್ನು ಪಾವಗಡದ ಹಾಸ್ಟೆಲ್ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು, ಮೇ 6ರಂದು ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಅದರಲ್ಲಿ ಮೂರು ಜನರಿಗೆ ಕರೋನಾ ಸೋಂಕು ದೃಡಪಟ್ಟಿರುವ ವರದಿ ಬಂದಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕರು ಕೂಡ ಅಲ್ಲಿನ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ತುಮಕೂರು ಜಿಲ್ಲೆಗೆ ಬೇರೆ ಜಿಲ್ಲೆಯಿಂದ ಅಥವಾ ಬೇರೆ ರಾಜ್ಯಗಳಿಂದ ಯಾರಾದರೂ ಬಂದರೆ ಅಂತಹವರ ಮಾಹಿತಿಯನ್ನು ನೀಡಬೇಕು. ತುಮಕೂರು ಜಿಲ್ಲೆಯ ಎಲ್ಲಾ ಗಡಿಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಮಾಡಲಾಗಿದೆ. ರಾತ್ರಿಯ ಹೊತ್ತು ಹೊಲಗಳ ಮುಖಾಂತರ, ತೋಟಗಳ ಮುಖಾಂತರ, ಕಾಡುಗಳ ಮುಖಾಂತರ ತಮ್ಮ ತಮ್ಮ ಮನೆಗಳನ್ನು ಸೇರುವ ಸಾಧ್ಯತೆ ಇರುತ್ತದೆ. ಅಂಥವರ ಮಾಹಿತಿ ನೀಡಿದರೆ ಅವರಿಗೆ ಸೂಕ್ತ ರೀತಿಯಲ್ಲಿ ಪರೀಕ್ಷೆಯನ್ನು ನಡೆಸಿ ಚಿಕಿತ್ಸೆ ನೀಡಲಾಗುತ್ತದೆ. ಯಾರು ಭಯಪಡುವ ಅವಶ್ಯಕತೆಯಿಲ್ಲ ದಯವಿಟ್ಟು ಮಾಹಿತಿ ನೀಡಿ ಎಂದು ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ಮನವಿ ಮಾಡಿದ್ದಾರೆ.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.