ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ಜಿಲ್ಲೆಯ ವಾಣಿಜ್ಯ ಕೇಂದ್ರ ಚಿಂತಾಮಣಿಯಲ್ಲಿ ಕೋವಿಡ್-19 ಸೋಂಕು ಧೃಡಪಟ್ಟಿರುವ ವ್ಯಕ್ತಿಗಳೊಂದಿಗೆ ನಗರದ ಇಬ್ಬರು ಸಂಪರ್ಕ ಹೊಂದಿದ್ದಾರೆ ಎಂಬ ಸುಧ್ಧಿಯಿಂದ ನಾಗರಿಕರಲ್ಲಿ ಆತಂಕ ಮನೆ ಮಾಡಿದೆ.
ನಗರದಲ್ಲಿರುವ ಇಬ್ಬರು ವ್ಯಕ್ತಿಗಳು ಚಿಂತಾಮಣಿಯ ಕೋವಿಡ್-19 ಸೋಂಕಿತರ ಮನೆಗೆ ಹೋಗಿದ್ದರು ಎಂದು ಮಾಹಿತಿಯನ್ನು ಅರಿತ ತಾಲೂಕು ದಂಡಾಧಿಕಾರಿ ಕೆ.ಅರುಂಧತಿ ಹಾಗೂ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ಮೂರ್ತಿ ಮತ್ತು ಅವರ ತಂಡ ಹಾಗೂ ನಗರದ ಇಬ್ಬರು ವ್ಯಕ್ತಿಗಳ ಕುಟುಂಬ ಸದಸ್ಯರು 6 ಮಂದಿ ಸಹಿತ 14 ಮಂದಿಗೆ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಶಂಕರ್ ಮಠ ಬೀದಿಯಲ್ಲಿ ಆರೋಗ್ಯ ಅರಿವು: ಕೊರೊನಾ ಸೋಂಕಿತರೊಂದಿಗೆ ಇಬ್ಬರು ಸಂಪರ್ಕದಲ್ಲಿದ್ದಾರೆ ಎಂಬುದನ್ನು ಗಂಭೀರವಾಗಿ ಪರಿಗಣಿಸಿದ ತಾಲೂಕು ಆಡಳಿತ ಇಂದು ಬೆಳಿಗ್ಗೆಯಿಂದಲೇ ಶಂಕರ್ಮಠದಲ್ಲಿರುವ ಎಲ್ಲಾ ಮನೆ ಮನೆಗೆ ತೆರಳಿ ಆರೋಗ್ಯ ಇಲಾಖೆಯ ಸಿಬ್ಬಂದಿ ಮೂಲಕ ಮನೆಯಲ್ಲಿರುವ ಜನರ ವಯಸ್ಸು,ಆರೋಗ್ಯ ಸ್ಥಿತಿಗತಿಗಳ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ ಇಡೀ ಬಡಾವಣೆಯಲ್ಲಿ ಸುಮಾರು 371 ಜನಗಳಿಂದ ಆರೋಗ್ಯ ಮಾಹಿತಿ ಸಂಗ್ರಹ ಮಾಡಿದ್ದಾರೆ.
14 ಮಂದಿಗೆ ಹೋಮ್ ಕ್ವಾರಂಟೈನ್: ನಗರದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆಯ ಸಿಬ್ಬಂದಿ 14 ಮಂದಿಯನ್ನು ಹೋಂ ಕ್ವಾರಂಟೈನ್ ಮಾಡಿ ಎಚ್ಚರಿಕೆವಹಿಸಲಾಗಿದೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಮಾತ್ರ ಯಾವುದೇ ರೀತಿಯ ಕೋವಿಡ್-19 ಪ್ರಕರಣ ಪತ್ತೆಯಾಗಿಲ್ಲ ಆದರೇ ಚಿಂತಾಮಣಿಯಲ್ಲಿ ಧೃಡವಾಗಿರುವ ಕೋವಿಡ್-19 ಸೋಂಕಿತರೊಂದಿಗೆ ನಗರದ ಇಬ್ಬರು ಸಂಪರ್ಕ ಸಾಧಿಸಿದ್ದರಿಂದ ಇಡೀ ತಾಲೂಕಿನ ಜನ ಆತಂಕಗೊಂಡಿದ್ದರು ಆದರೇ ತಹಶೀಲ್ದಾರ್ ಮತ್ತು ಆರೋಗ್ಯಾಧಿಕಾರಿ ತಕ್ಷಣ ಎಚ್ಚೆತ್ತು ಕೊಂಡು ಜನರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಿ ಧೈರ್ಯತುಂಬಿಸುವ ಕೆಲಸವನ್ನು ಮಾಡಿದ್ದಾರೆ ನಾಗರಿಕರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೂಡದೆ ಮನೆಯಲ್ಲಿರಬೇಕೆಂದು ಮನವಿ ಮಾಡಿದ್ದಾರೆ.
ಎಸ್ಪಿ-ಎಸಿ ಭೇಟಿ: ಉಪವಿಭಾಗಾಧಿಕಾರಿ ರಘುನಂದನ್ ಮತ್ತು ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ನಗರಕ್ಕೆ ಭೇಟಿ ನೀಡಿ ಕೊರೊನಾ ಸೋಂಕು ನಿಯಂತ್ರಣ ಮಾಡಲು ಕೈಗೊಂಡಿರುವ ಕ್ರಮಗಳ ಕುರಿತು ತಾಲೂಕು ಆರೋಗ್ಯಾಧಿಕಾರಿ ಹಾಗೂ ತಹಶೀಲ್ದಾರ್ ಅವರಿಂದ ಮಾಹಿತಿ ಸಂಗ್ರಹಿಸಿದ್ದಾರೆ ಶಿಡ್ಲಘಟ್ಟ ನಗರ ಸೇರಿದಂತೆ ತಾಲೂಕಿನಾದ್ಯಂತ ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.
ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.