ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್) : ಚಿಕ್ಕಬಳ್ಳಾಪುರ ಜಿಲ್ಲೆಯ ವಾಣಿಜ್ಯ ಕೇಂದ್ರ ಚಿಂತಾಮಣಿಯಲ್ಲಿ ಕೊರೊನಾ ಸೋಂಕಿತರೊಂದಿಗೆ ಸಂಪರ್ಕ ಸಾಧಿಸಿದ ನಗರದ ಇಬ್ಬರು ಸೇರಿದಂತೆ 13 ಜನರ ಗಂಟಲು ದ್ರವ ಪರೀಕ್ಷಾ ವರದಿ ನಗೆಟಿವ್ ಬಂದಿದೆ ಎಂದು ತಹಶೀಲ್ದಾರ್ ಕೆ.ಅರುಂಧತಿ ತಿಳಿಸಿದರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಸುಧ್ಧಿಗಾರರೊಂದಿಗೆ ಮಾತನಾಡಿದ ಅವರು ಚಿಂತಾಮಣಿಯಲ್ಲಿ ಕೋವಿಡ್-19 ಸೋಂಕಿತರೊಂದಿಗೆ ಸಂಪರ್ಕ ಸಾಧಿಸಿದ ಇಬ್ಬರು ವ್ಯಕ್ತಿಗಳು ಹಾಗೂ ಅವರ ಕುಟುಂಬ ಸದಸ್ಯರು ಸಹಿತರು ಸಹಿತ 13 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು ಅದರ ವರದಿ ನಗೆಟಿವ್ ಬಂದಿದೆ ಎಂದು ಸ್ಪಷ್ಟಪಡಿಸಿದರು.
ಕೊರೊನಾ ಸೋಂಕು ನಿಯಂತ್ರಣ ಮಾಡಲು ಈಗಾಗಲೇ ಲಾಕ್ಡೌನ್ ಜಾರಿಯಲ್ಲಿದೆ ನಾಗರಿಕರು ಅನಗತ್ಯವಾಗಿ ಮನೆಯಿಂದ ಹೊರಬರಬೇಡಿ ನಗೆಟಿವ್ ವರದಿ ಬಂದಿರುವ ವ್ಯಕ್ತಿಗಳಿಗೆ ಹೋಂ ಕ್ವಾರಂಟೈನ್ನಲ್ಲಿ ಇಟ್ಟು ತೀವ್ರ ನಿಗಾವಹಿಸಿದ್ದೇವೆ ಮುಂದಿನ 14 ದಿನಗಳ ಕಾಲ ಅವರ ಆರೋಗ್ಯ ಸ್ಥಿತಿಯನ್ನು ನಿತ್ಯ ಅವಲೋಕನ ಮಾಡುತ್ತೇವೆ ಮುಂದಿನ 7 ಮತ್ತು 12 ದಿನಗಳ ನಂತರ ಪುನಃ ಅವರ ಗಂಟಲು ದ್ರವ ಪರೀಕ್ಷೆ ಮಾಡುತ್ತೇವೆ ಎಂದರು.
ನಗರ ಪ್ರದೇಶದಲ್ಲಿ ನಗರಸಭೆಯ ಪೌರಾಯುಕ್ತರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಹಗಲಿರುಳು ಕೊರೊನಾ ಸೋಂಕು ನಿಯಂತ್ರಣ ಮಾಡಲು ಸಹಕರಿಸಿದ್ದಾರೆ ಹಾಗೆಯೇ ಪತ್ರಕರ್ತರು ಸಹ ಜನರಲ್ಲಿ ವ್ಯಾಪಕವಾಗಿ ಜಾಗೃತಿ ಮೂಡಿಸಲು ತಾಲೂಕು ಆಡಳಿತದೊಂದಿಗೆ ಸಹಕರಿಸಿದ್ದಾರೆ ಮುಂದಿನ ದಿನಗಳಲ್ಲಿ ಸಹ ಎಲ್ಲರು ಸಹಕಾರ ನೀಡಬೇಕೆಂದು ಮನವಿ ಮಾಡಿದಲ್ಲದೆ ಗ್ರಾಮಾಂತರ ಪ್ರದೇಶದಲ್ಲಿ ತಾಪಂ ಇಓ ಶಿವಕುಮಾರ್ ಅವರ ನೇತೃತ್ವದಲ್ಲಿ ಗ್ರಾಮ ನೈರ್ಮಲ್ಯ ಕಾಪಾಡಲಾಗಿದೆ ಜೊತೆಗೆ ಕೊರೊನಾ ಕಾರ್ಯಪಡೆಯನ್ನು ರಚಿಸಿ ಅತ್ಯುತ್ತಮವಾಗಿ ಕೆಲಸವನ್ನು ಮಾಡಿದ್ದಾರೆ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ಮೂರ್ತಿ ಮಾತನಾಡಿ ಚಿಂತಾಮಣಿ ತಾಲೂಕಿನ ಕರೊನಾ ಸೋಂಕಿತರೊಂದಿಗೆ ನಗರದ ಇಬ್ಬರು ಸಂಪರ್ಕ ಸಾಧಿಸಿದರು ಎಂಬ ಕಾರಣಕ್ಕೆ ಆತಂಕಗೊಂಡಿದ್ದರು ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ತಾಲೂಕು ದಂಡಾಧಿಕಾರಿಗಳು ಎಲ್ಲರಿಗೂ ಧೈರ್ಯ ತುಂಬಿಸುವ ಕೆಲಸವನ್ನು ಮಾಡಿದ್ದಾರೆ ತಾಲೂಕಿನಲ್ಲಿ 34 ಮಂದಿಗೆ ಕ್ವಾರಂಟೈನನಲ್ಲಿ ಇಡಲಾಗಿದೆ ಇನ್ನೂ ಹಲವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ ಅವರು ಯಾರಾದರೂ ಹೊರಬರುವುದನ್ನು ಕಂಡು ಬಂದರೇ ಕೂಡಲೇ ಪೋಲಿಸರಿಗೆ ದೂರು ಸಲ್ಲಿಸಬೇಕೆಂದರು.
ಕ್ರೇಸೆಂಟ್ ಶಾಲೆಯಿಂದ ವಾಹನ ವ್ಯವಸ್ಥೆ: ತಾಲೂಕಿನಲ್ಲಿ ವಲಸೆ ಕಾರ್ಮಿಕರಿಗೆ ಅನುಕೂಲ ಕಲ್ಪಿಸಲು ನಗರದ ಕ್ರೆಸೆಂಟ್ ಶಾಲೆಯ ಕಾರ್ಯದರ್ಶಿ ಮೊಹ್ಮದ್ ತಮೀಮ್ ಅನ್ಸಾರಿ ಅವರು ಉಚಿತವಾಗಿ ಶಾಲಾ ವಾಹನದ ಸೇವೆ ಒದಗಿಸಿದ್ದಾರೆ ಅದಕ್ಕಾಗಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಕೆಲವೊಂದು ಶಾಲಾ ಆಡಳಿತ ಮಂಡಳಿ ಸಹಕರಿಸಿಲ್ಲ ಅದರ ಕುರಿತು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದೇವೆ ಎಂದರು.
ಕೋವಿಡ್-19 ತಾಲೂಕು ನೋಡಲ್ ಅಧಿಕಾರಿ ಶಿವಕುಮಾರ್ ಮಾತನಾಡಿ ಕೊರೊನಾ ಸೋಂಕು ನಿಯಂತ್ರಣ ಮಾಡಲು ತಾಲೂಕು ಆಡಳಿತ ಬಿಗಿ ಕ್ರಮ ಕೈಗೊಂಡಿದೆ ಸರ್ಕಾರದ ಆದೇಶಗಳಂತೆ ಜಿಲ್ಲೆ-ನೆರೆ ಜಿಲ್ಲೆ ಅಥವಾ ಹೊರ ರಾಜ್ಯಗಳಿಂದ ಬರುವ ಜನರನ್ನು ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲಾಗುತ್ತದೆ ಮಾಸ್ಕ್ ಧರಿಸದೆ ಬರುವ ವ್ಯಕ್ತಿಗಳಿಗೆ ದಂಡ ವಿಧಿಸಲಾಗುತ್ತದೆ ನಾಗರಿಕರು ಮನೆಯಲ್ಲಿದ್ದು ಸಹಕರಿಸಿ ಆರೋಗ್ಯಸೇತು ಆಪ್ ಡೌನ್ಲೋಡ್ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.
ಸುಧ್ಧಿಗೋಷ್ಠಿಯಲ್ಲಿ ನಗರಸಭೆಯ ಪೌರಾಯುಕ್ತ ತ್ಯಾಗರಾಜ್,ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ವಾಣಿ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.