(www.vknews.com) : ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯ ದ.ಕ.ಜಿಲ್ಲಾ ವತಿಯಿಂದ ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಭಾಶ್ ನಗರ ಪರಿಸರದಲ್ಲಿ 3 ಮಕ್ಕಳ ವಿಧವೆ ತಾಯಿಗೆ ಮನೆ ನಿರ್ಮಾಣಕ್ಕೆ ಶಂಕು ಸ್ಥಾಪನೆಯನ್ನು ಟಿಪ್ಪು ಸುಲ್ತಾನ್ ಮಹಾವೇದಿಕೆಯ ದ.ಕ.ಜಿಲ್ಲಾಧ್ಯಕ್ಷ ಇಸ್ಮಾಯಿಲ್ ಶಾಫಿ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಲಾಕ್ ಡೌನ್ ಸಂದರ್ಭದಲ್ಲಿ ಆಹಾರ ಸಾಮಾಗ್ರಿಗಳನ್ನು ವಿತರಿಸುವ ಸಂದರ್ಭ ಈ ಮನೆಯು ಬಹಳಷ್ಟು ನಾದುರಸ್ತಿಯಾಗಿದ್ದು ಅದನ್ನು ಮನಗೊಂಡು ಇಂದು ದಾನಿಗಳ ಸಹಾಯದಿಂದ ಮನೆ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿದ್ದೇವೆ. ಈ ಮನೆಯ ಕಾಮಗಾರಿಯನ್ನು ಶೀಘ್ರವೇ ಪೂರ್ತಿಗೊಳಿಸಿ ಅವರಿಗೆ ಹಸ್ತಾಂತರಿಸುವುದಾಗಿ ಹೇಳಿದರು. ಮುಂದೆಯೂ ದಾನಿಗಳ ಸಹಕಾರ ಅಗತ್ಯ ಇದೆ, ನಮಗೆ ಸಹಕರಿಸಿದ ಎಲ್ಲಾ ದಾನಿಗಳಿಗೆ ಅಭಿನಂದನೆ ತಿಳಿಸಿದರು.
ಆರ್.ಕೆ ಮದನಿ ಅಮ್ಮೆಂಬಳ ದುಆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಭಾಶ್ ನಗರ ಪರಿಸರದಲ್ಲಿ 3 ಮಕ್ಕಳ ವಿಧವೆ ತಾಯಿಗೆ ಮನೆ ನಿರ್ಮಿಸಿ ಕೊಡಲು ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯ ದ.ಕ.ಜಿಲ್ಲಾ ಪದಾಧಿಕಾರಿಗಳೊಂದಿಗೆ ಚರ್ಚಿಸಿ, ಮತ್ತು ದಾನಿಗಳನ್ನು ಸಂಪರ್ಕಿಸಿ ಮನೆಯನ್ನು ನಿರ್ಮಿಸಿಕೊಡಲು ಆಹೋ ರಾತ್ರಿ ಕಷ್ಟ ಪಡುತ್ತಿರುವ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆಯವರ ಕಾರ್ಯವು ಶ್ಲಾಘನೀಯ. ಇದಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲಾ ದಾನಿಗಳನ್ನು ದೇವರು ಅನುಗ್ರಹಿಸಲಿ ಎಂದರು. ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯ ದ.ಕ.ಜಿಲ್ಲಾ ಉಪಾಧ್ಯಕ್ಷ ಮುನೀರ್ ಅಸೈಗೋಳಿ, ಮುನ್ನೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಬ್ದುರ್ರಹ್ಮಾನ್, ಸುಭಾಶ್ ನಗರ ಮಸೀದಿಯ ಅದ್ಯಕ್ಷ ಅಬ್ದುಲ್ ಹಮೀದ್, ಖಜಾಂಜಿ ಇಸ್ಮಾಯಿಲ್, ಗುತ್ತಿಗೆದಾರರಾದ ಹಸನಬ್ಬ ಉಳ್ಳಾಲ್ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.