ಲಕ್ನೋ (www.vknews.com) : ಹಾಡಹಗಲೇ ಜನರ ಮುಂದೆಯೇ ಸಮಾಜವಾದಿ ಪಕ್ಷದ ಸ್ಥಳೀಯ ನಾಯಕ ಮತ್ತು ಪುತ್ರನನ್ನು ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದ ಘಟನೆ ನಡೆದಿದ್ದು, ಈ ಭಯಾನಕ ಘಟನೆಯ ವಿಡಿಯೋ ವೈರಲ್ ಆಗಿದೆ.
ಲಕ್ನೋದಿಂದ 379 ಕಿ.ಮೀ. ದೂರದ ಸಂಭಾಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮನ್ರೇಗಾದಡಿ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿ ನಡೆದ ವಾಗ್ವಾದದ ನಂತರ ಈ ಘಟನೆ ನಡೆದಿದೆ ಎನ್ನಲಾಗಿದೆ.
ರಸ್ತೆ ನಿರ್ಮಾಣ ವೀಕ್ಷಿಸಲು ಎಸ್ಪಿ ನಾಯಕ ಚೋಟೆ ಲಾಲ್ ದಿವಾಕರ್ ಮತ್ತು ಪುತ್ರ ಹೋಗಿದ್ದರು. ಈ ಸಂದರ್ಭ ಅಲ್ಲಿದ್ದ ಇಬ್ಬರು ಸ್ಥಳೀಯರು ರಸ್ತೆ ನಿರ್ಮಾಣ ವಿಚಾರವಾಗಿ ವಾಗ್ವಾದಕ್ಕಿಳಿದಿದ್ದಾರೆ. ಈ ಇಬ್ಬರು ರೈಫಲ್ ಗಳನ್ನು ಹಿಡಿದಿದ್ದರು. ಮಾತಿಕ ಚಕಮಕಿ ತೀವ್ರವಾಗುತ್ತಿದ್ದಂತೆ ಇಬ್ಬರು ತಂದೆ ಮಗನ ಮೇಲೆ ಇದ್ದಕ್ಕಿದ್ದಂತೆ ಗುಂಡು ಹಾರಿಸಿದ್ದಾರೆ. ಗುಂಡಿನ ಏಟಿಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.