ಪುತ್ತೂರು(ವಿಶ್ವಕನ್ನಡಿಗ ನ್ಯೂಸ್): ಕೊರೋನದ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಕೇಂದ್ರ ಸರಕಾರ ಕಾರ್ಮಿಕರನ್ನು ಹಲ್ಲಿಲ್ಲದ ಹಾವಿನಂತೆ ಮಾಡುವುದಕ್ಕೋಸ್ಕರ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮಾಡಿದೆ.
ಈ ತಿದ್ದುಪಡಿ ಕಾಯ್ದೆಗಳ ಪ್ರಕಾರ ಕಾರ್ಮಿಕರು ಶಾಂತಿಯುತವಾಗಿ ಪ್ರತಿಭಟಿಸುವಂತಿಲ್ಲ, ಒಕ್ಕೂಟಗಳನ್ನು ಅಥವಾ ಸಂಘಗಳನ್ನು ರಚಿಸುವ ಹಕ್ಕನ್ನು ನಿರಾಕರಿಸುತ್ತದೆ. ಕಾರ್ಮಿಕ ಸಂಘಗಳ ಮಾನ್ಯತೆ ಸ್ಥಗಿತಗೊಳ್ಳಲಿದೆ. ಈ ಹೊಸ ಕಾನೂನುಗಳು ಕಾರ್ಮಿಕರ ಆರೋಗ್ಯದ ಹಕ್ಕು, ವಿರಾಮ, ಸುರಕ್ಷಿತ ಕೆಲಸದ ಪರಿಸ್ಥಿತಿಗಳ ಮೇಲೆ ಪರಿಣಾಮ ಬೀರುತ್ತವೆ. ಅದು ಸಂವಿಧಾನದ 21 ನೇ ಪರಿಚ್ಛೇಧದ ಅಡಿಯಲ್ಲಿ ಜೀವಿಸುವ ಹಕ್ಕಿನ ವ್ಯಾಪ್ತಿಯಲ್ಲಿ ಬರುತ್ತದೆ. ಕಾರ್ಮಿಕ ಕಾನೂನುಗಳ ಕುರಿತಾದ ಅಂತರರಾಷ್ಟ್ರೀಯ ಚೌಕಟ್ಟನ್ನು ಈ ತಿದ್ದುಪಡಿಗಳು ಉಲ್ಲಂಘಿಸಿವೆ ಎಂದು ಹೇಳಲಾಗುತ್ತಿದೆ.
ಆದ್ದರಿಂದ ಯಾವುದೇ ಕಾರಣಕ್ಕೂ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಮಾಡಬಾರದು ಎಂದು ಫೆಡರೇಶನ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (FITU)ಕರ್ನಾಟಕ ಇದರ ವತಿಯಿಂದ ಸಹಾಯಕ ಕಮೀಷನರ್ ಮೂಲಕ ಗೌರವಾನ್ವಿತ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.
ಈ ಕಾರ್ಮಿಕ ಕಾನೂನುಗಳಲ್ಲಿ ಮಾಡಿದ ಬದಲಾವಣೆಗಳು, ಆರ್ಥಿಕ ಚಟುವಟಿಕೆ ಮತ್ತು ಮಾರುಕಟ್ಟೆ ಸುಧಾರಣೆಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ. ಆದರೆ ಇದು ವಾಸ್ತವದಲ್ಲಿ ಕಾರ್ಮಿಕರನ್ನು ಬಲವಂತದ ದುಡಿಮೆಗೆ ತಳ್ಳುವಂತಹ ಕಾಯ್ದೆಯಾಗಿದೆ ಎಂದು ಅನುಮಾನವಿದೆ.ಅಷ್ಟು ಮಾತ್ರವಲ್ಲ ಬಂಡವಾಳ ಶಾಹಿಗಳ ಅಣತಿಯಂತೆ ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಈ ಕಾಯ್ದೆಯನ್ನು ತಿದ್ದುಪಡಿ ಮಾಡಲಾಗಿದೆ ಎಂದು FITU ವಿಗೆ ಬಲವಾದ ಸಂಶಯವಿದೆ. ಈ ಸಂಧರ್ಭದಲ್ಲಿ FITU ರಾಜ್ಯ ಪ್ರಧಾನ ಕಾರ್ಯದರ್ಶಿ ಸುಲೈಮಾನ್ ಕಲ್ಲರ್ಪೆ, ಅಬ್ದುಲ್ ರಝಾಕ್,ಆಂತೋನಿ ಮಸ್ಕರೆನಸ್,ಮಹಮ್ಮದ್ ಕುಂಬ್ರ,ತನ್ವೀರ್ ವಳತ್ತಡ್ಕ,ಮುಹಮ್ಮದ್ ರಫೀಕ್ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.