ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್) : ಸತತ ಬರಗಾಲದಿಂದ ತತ್ತರಿಸುತ್ತಿರುವ ಚಿಕ್ಕಬಳ್ಳಾಪುರ ಜಿಲ್ಲೆಗೆ ಹೆಬ್ಬಾಳ-ನಾಗವಾರ ಕೆರೆಯ ಶುಧ್ಧಿಕರಿಸಿದ ನೀರು ಹರಿಯುತ್ತಿದ್ದು ಅತಿ ಶೀಘ್ರದಲ್ಲಿ ಶಿಡ್ಲಘಟ್ಟ ನಗರದ ಅಮಾನಿಕೆರೆಗೆ ಹೆಚ್.ಎನ್.ವ್ಯಾಲಿ ನೀರು ಹರಿಯಲಿದೆ ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.
ನಗರದ ಕದಿರಿಪಾಳ್ಯದಲ್ಲಿ ನೀರು ಶುಧ್ಧಿಕರಣ ಘಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಲು ಹೋರಾಟ ನಡೆಸಿದ ಫಲದಿಂದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೋಲಾರ ಜಿಲ್ಲೆಗೆ ಕೆಸಿ ವ್ಯಾಲಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಹೆಚ್.ಎನ್.ವ್ಯಾಲಿ ನೀರು ಹರಿಸಲು ಯೋಜನೆ ರೂಪಿಸಿದರಿಂದ ಅವಳಿ ಜಿಲ್ಲೆಗಳಿಗೆ ಶುಧ್ಧಿಕರಿಸಿದ ನೀರು ಕೆರೆಗಳಿಗೆ ಹರಿಯಲಿದ್ದು ಇದರಿಂದ ಅಂರ್ತಜಲಮಟ್ಟ ವೃಧ್ಧಿಯಾಗಿ ರೈತರು ಮತ್ತು ಜನಸಾಮಾನ್ಯರಿಗೆ ಅನುಕೂಲವಾಗಲಿದೆ ಎಂದರು.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಲ್ಲಿ ಹೂಳೆತ್ತುವ ಜಲಸಂವರ್ಧನೆ ಯೋಜನೆಯನ್ನು ತಮ್ಮ ಕಾಲಾವಧಿಯಲ್ಲಿ ಜಾರಿಗೊಳಿಸಲಾಗಿತ್ತು ನಂತರ ಬಂದ ಸರ್ಕಾರ ಈ ಯೋಜನೆಯನ್ನು ಮುಂದುವರೆಸಿಲ್ಲ ಇದೀಗ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಅಂರ್ತಜಲಮಟ್ಟ ವೃಧ್ಧಿಗೊಳಿಸುವ ಕಾಮಗಾರಿಗಳನ್ನು ಸರ್ಕಾರ ಕೈಗೊಂಡಿದೆ ಎಂದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ನಾರಾಯಣಸ್ವಾಮಿ, ರಿಯಾಝ್ಪಾಷ,ವಕೀಲ ಮುನಿರಾಜು,ಭಾಜಪ ಮುಖಂಡ ಬಿ.ಕೆಂಪರೆಡ್ಡಿ, ನಗರಸಭೆಯ ಪೌರಾಯುಕ್ತ ತ್ಯಾಗರಾಜ್,ಆರೋಗ್ಯ ನಿರೀಕ್ಷಕಿ ಶೋಭಾ, ನಗರಸಭೆ ನೀರು ಸರಬರಾಜು ವಿಭಾಗದ ಮುರಳಿ, ಜೆಇ ರಮೇಶ್, ಪ್ರಸಾದ್, ಸುಧಾಕರ್,ಶ್ರೀನಿವಾಸ್,ರೆಡ್ಡಿ,ಮನೋಹರ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.