ಬೆಂಗಳೂರು(www.vknews.in): ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ ದೇಶದ ಕೆಂಪು ವಲಯಗಳಾದ ಮಹಾರಾಷ್ಟ್ರ, ರಾಜಸ್ಥಾನ, ದೆಹಲಿ, ಗುಜರಾತ್, ತಮಿಳುನಾಡು ಹಾಗೂ ಮಧ್ಯಪ್ರದೇಶದಂಥ ರಾಜ್ಯಗಳಿಂದ ಕರ್ನಾಟಕಕ್ಕೆ ವಿಮಾನದಲ್ಲಿ ಬಂದಿಳಿಯುವ ಪ್ರಯಾಣಿಕರಿಗೆ 7 ದಿನಗಳ ಕ್ವಾರಂಟೈನ್ ಕಡ್ಡಾಯವಾಗಿದೆ. ಆದರೆ ಇಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ನವದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದಿಳಿದು ಅಧಿಕೃತ ಕಾರಿನಲ್ಲಿ ನೇರವಾಗಿ ತಮ್ಮ ಮನೆಗೆ ತೆರಳಿದರು. ಸಚಿವರ ಈ ನಡೆಯು ಈಗ ತೀವೃ ಚರ್ಚೆಗೆ ಕಾರಣವಾಗಿದೆ.
ಈ ಕುರಿತು ಪ್ರತಿಕ್ರಯಿಸಿದ ಸದಾನಂದ ಗೌಡ ಅನರು “ಕೇಂದ್ರ ಸರಕಾರದ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಔಷಧ ಖಾತೆಯ ಸಚಿವನಾದ ನನಗೆ ಕ್ವಾರಂಟೈನ್ ನಿಯಮದಿಂದ ವಿನಾಯಿತಿ ಇದೆ” ಎಂದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.