ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಹಿಳೆಯರಿಗೆ ಆರ್ಥಿಕವಾಗಿ ಚೈತನ್ಯ ತುಂಬಿಸುವ ಕೆಲಸವನ್ನು ಡಿಸಿಸಿ ಬ್ಯಾಂಕ್ ಮಾಡುತ್ತಿದೆ ಅವಳಿ ಜಿಲ್ಲೆಯಲ್ಲಿ ಸ್ವಸಹಾಯ ಸಂಘಗಳ ಸದಸ್ಯರಿಗೆ ಬಡ್ಡಿರಹಿತ 100 ಕೋಟಿ ರೂಗಳ ಸಾಲ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿದರು.
ತಾಲೂಕಿನ ಮಳ್ಳೂರು ಗ್ರಾಮದ ಸಮೀಪದ ಶ್ರೀ ಸಾಯಿನಾಥ್ ಜ್ಞಾನಮಂದಿರದ ಸಭಾಂಗಣದಲ್ಲಿ ಮಳ್ಳೂರು ಎಸ್.ಎಫ್.ಸಿ.ಎಸ್ ಹಾಗೂ ಡಿಸಿಸಿ ಬ್ಯಾಂಕಿನ ಮೂಲಕ 1 ಕೋಟಿ 25 ಲಕ್ಷ ರೂಗಳ ಬಡ್ಡಿರಹಿತ ಸಾಲ ಸೌಲಭ್ಯವನ್ನು ವಿತರಿಸಿ ಮಾತನಾಡಿದ ಅವರು ಕೊರೊನಾ ಸೋಂಕಿನ ಸಂಕಷ್ಟದಲ್ಲಿ ಸಿಲುಕಿರುವ ನಮ್ಮ ತಾಯಂದಿರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬ್ಯಾಂಕ್ ಶ್ರಮಿಸುತ್ತಿದ್ದು ಈಗಾಗಲೇ 68 ಕೋಟಿ ರೂಗಳ ಸಾಲ ಸೌಲಭ್ಯ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಹೆಚ್ಚುವರಿಯಾಗಿ 100 ಕೋಟಿ ರೂಗಳ ಸಾಲಸೌಲಭ್ಯ ಕಲ್ಪಿಸಲಾಗುವುದೆಂದರು.
ದೇಶದಲ್ಲಿ ಮಾದರಿಯಾಗಿ ರಾಜ್ಯದಲ್ಲಿ ಮಹಿಳಾ ಸ್ವಸಹಾಯ ಸಂಘಗಳಿಗೆ ಬಡ್ಡಿರಹಿತ ಸಾಲ ನೀಡುವ ಯೋಜನೆಯನ್ನು ಜಾರಿಗೊಳಿಸಿರುವ ಕೀರ್ತಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಜೊತೆಗೆ ಹಸಿವುನಿಂದ ಯಾರು ಬಳಲುಬಾರದೆಂದು ಅನ್ನದಾನ ಯೋಜನೆಯನ್ನು ಜಾರಿಗೊಳಿಸಿ ಹಾಲು ಉತ್ಪಾದಕರಿಗೆ 5 ರೂಗಳ ಪ್ರೋತ್ಸಾಹಧನ ಮತ್ತು ಸರ್ಕಾರಿ ಶಾಲಾ ಮಕ್ಕಳಿಗೆ ಕ್ಷೀರಭಾಗ್ಯ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿದರಿಂದ ಜನಸಾಮಾನ್ಯರು ಮತ್ತು ಕೂಲಿ ಕಾರ್ಮಿಕರಿಗೆ ನೆಮ್ಮದಿಯಿಂದ ಜೀವನ ನಡೆಸುವಂತಾಗಿದೆ ಎಂದರಲ್ಲದೆ ಕಷ್ಟದಲ್ಲಿ ಯಾರು ಸಹಾಯ ಮಾಡ್ತಾರೋ ಅಥವಾ ಸ್ಪಂದಿಸ್ತಾರೋ ಅವರನ್ನು ಸದಾ ನೆನೆಪು ಮಾಡಿಕೊಳ್ಳಬೇಕೆಂದರು.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭ್ರಷ್ಟಚಾರಮುಕ್ತ ರಾಜಕೀಯ ವ್ಯವಸ್ಥೆಯನ್ನು ಸದೃಡಗೊಳಿಸಲು ಮಹಿಳೆಯರು ಧೃಡಸಂಕಲ್ಪ ಮಾಡಬೇಕಾಗಿದೆ ಇದರಿಂದ ಆಡಳಿತ ವ್ಯವಸ್ಥೆ ಪಾರದರ್ಶಕವಾಗಿರುತ್ತದೆ ಜೊತೆಗೆ ಉತ್ತಮರನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದ ಅವರು ಚುನಾವಣೆ ವೇಳೆಯಲ್ಲಿ ನೋಟುಕೊಟ್ಟು ಓಟು ಪಡೆಯುವ ಅವಕಾಶವಾದಿ ರಾಜಕಾರಣಿಗಳಿಗೆ ಗೇಟ್ಪಾಸ್ ನೀಡಿ ಕ್ಷೇತ್ರವನ್ನು ಮಾದರಿಯಾಗಿ ಪರಿವರ್ತಿಸುವ ದೂರದೃಷ್ಠಿಯನ್ನು ಹೊಂದಿರುವ ಶಾಸಕ ವಿ.ಮುನಿಯಪ್ಪ ಅವರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಶಾಸಕ ವಿ.ಮುನಿಯಪ್ಪ ಮಾತನಾಡಿ ಕ್ಷೇತ್ರದಲ್ಲಿ ಈಗಾಗಲೇ ಮಹಿಳಾ ಸ್ವಸಹಾಯ ಸಂಘಗಳಿಗೆ 22 ಕೋಟಿ ರೂಗಳ ಬಡ್ಡಿರಹಿತ ಸಾಲ ಸೌಲಭ್ಯವನ್ನು ನೀಡಲಾಗಿದೆ ಮಳ್ಳೂರು ಎಸ್.ಎಫ್.ಸಿ.ಎಸ್ ಬ್ಯಾಂಕಿನ ಮೂಲಕವೇ ಈಗಾಗಲೇ 9 ಕೋಟಿ ರೂಗಳ ಸಾಲ ಸೌಲಭ್ಯ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಮಹಿಳೆಯರಿಗೆ ಬಡ್ಡಿರಹಿತ ಸಾಲ ಸೌಲಭ್ಯವನ್ನು ಒದಗಿಸಲು ಬ್ಯಾಂಕಿನ ಅಧ್ಯಕ್ಷರು ಭರವಸೆ ನೀಡಿದ್ದು ಮಹಿಳೆಯರು ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿಸಿ ಬೇರೆಯವರಿಗೆ ಸಾಲ ಸೌಲಭ್ಯ ಕಲ್ಪಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ನಾಗರಾಜ್,ಹಾಪ್ಕಾಮ್ಸ್ ಮಾಜಿ ಅಧ್ಯಕ್ಷ ಮುನೇಗೌಡ,ಡಿಸಿಸಿ ಬ್ಯಾಂಕಿನ ವ್ಯವಸ್ಥಾಪಕ ಆನಂದ್,ಮಳ್ಳೂರು ಎಸ್.ಎಫ್.ಸಿ.ಎಸ್ ಬ್ಯಾಂಕಿನ ಅಧ್ಯಕ್ಷ ರಾಮರೆಡ್ಡಿ,ನಾರಾಯಣಸ್ವಾಮಿ(ನಾನಿ),ಮಾಜಿ ಅಧ್ಯಕ್ಷ ವೆಂಕಟರೆಡ್ಡಿ,ಸಿಇಓ ಮಂಜುನಾಥ್,ನಿರ್ದೇಶಕರಾದ ಎಂ.ಆರ್.ಮುನಿಕೃಷ್ಣಪ್ಪ,ಮುನಿರಾಜು,ಸಂಜೀವಮ್ಮ,ಶಿಡ್ಲಘಟ್ಟ ಎಸ್.ಎಫ್.ಸಿ.ಎಸ್ ಬ್ಯಾಂಕಿನ ಅಧ್ಯಕ್ಷ ನಾರಾಯಣಸ್ವಾಮಿ,ಮಳ್ಳೂರು ಗ್ರಾಪಂ ಮಾಜಿ ಅಧ್ಯಕ್ಷ ಎಂ.ಎನ್.ನಾಗರಾಜ್,ಮುಖಂಡರಾದ ಹೆಬ್ಬಾಳ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು..
ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.