(www.vknews.com) : ಇಂದು ಪ್ರಪಂಚವೇ ಕೊರೋನಾ ಎಂಬ ಮಾಹಾ ವೈರಸ್ ಗೆ ಹೆದರಿ ಜೀವಿಸುತ್ತಿರುವ ಈ ಸಮಯದಲ್ಲಿಯೂ ಮಾನವೀಯತೆ ಮೆರೆದ ಯುವಕರು, ಕಲ಼ಡ್ಕದ ನಿಶಾಂತ್ ಎಂಬ ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಲು ಪ್ರಯತ್ನಿಸಿದಾಗ ವಿಷಯ ತಿಳಿದ ಸ್ಥಳೀಯ ಗೂಡಿನಬಳಿಯ ಮುಹಮ್ಮದ್, ಸಮೀರ್,ಝಾಯಿದ್ , ಆರಿಫ್, ಮುಕ್ತಾರ್ ತೌಸೀಫ್ ರವರು ಯಾವುದೇ ಜಾತಿ ಧರ್ಮ ವನ್ನು ಲೆಕ್ಕಿಸದೆ ಕೂಡಲೇ ತಮ್ಮ ಜೀವನವನ್ನು ಪಣಕ್ಕಿಟ್ಟು ನದಿಗೆ ಹಾರಿ ಆ ಯುವಕನನ್ನು ನದಿಯಿಂದ ದಡಕ್ಕೆ ಸೇರಿಸಿ ಪ್ರಥಮ ಚಿಕಿತ್ಸಾ ವಿಧಾನಗಳನ್ನು ನೀಡುವುದರ ಮೂಲಕ ಪ್ರಾಣವನ್ನು ರಕ್ಷಿಸಲು ಪ್ರಯತ್ನಿಸಿದರು.ಆದರೆ ವಿಧಿಯ ಆಟವು ಬೇರೆಯಾಗಿತ್ತು.
ಈ ಸಂದರ್ಭದಲ್ಲಿ ಹಫೀಝನ ಪಾತ್ರವೂ ಮಹತ್ವಪೂರ್ಣವಾದದ್ದು ಮೊದಲು ನೇತ್ರಾವತಿ ವೀರರ ಮನೆ ಬಾಗಿಲಿಗೆ ತೆರಳಿ ವಿಷಯ ಮುಟ್ಟಿಸಿದ್ದಾನೆ. ಆ ನಿರ್ದಿಷ್ಟ ಸ್ಥಳವನ್ನು ಸೂಚಿಸಿದ್ದು ಹಫೀಝ್ ಆಗಿದ್ದರು, ಈ ಹುಡುಗನಿಗೂ ತಮ್ಮೆಲ್ಲರ ಮೆಚ್ಚುಗೆಯೊಂದು ಇರಲಿ. ಈ ನೆತ್ರಾವತಿ ವೀರರಿಗೆ ಕರ್ನಾಟಕ ರಾಜ್ಯ ದಕ್ಷಿಣ ಕನ್ನಡ ಜಿಲ್ಲೆಯ ಟಿಪ್ಪು ಸುಲ್ತಾನ್ ಮಹಾ ವೇದಿಕೆ ವತಿಯಿಂದ ಸನ್ಮಾನ ಸಮಾರಂಭ ನಡೆಯಿತು.
ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಫಿ ಬಬ್ಬುಕಟ್ಟೆ ಯವರು ಸರಕಾರದಿಂದ ಸಿಗುವ ಎಲ್ಲಾ ಸೌವಲತ್ತುಗಳು ಕೂಡಲೇ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರು ಮತ್ತು ಶಾಸಕರು ಎಡವಟ್ಟು ವ್ಯವಸ್ಥೆ ಮಾಡಿ ಕೊಡಲು ಸಂಬಂಧ ಪಟ್ಟವರನ್ನು ಆಗ್ರಹಿಸಿದರು. ಮುಸಲ್ಮಾನರು ಈದುಲ್ ಫಿತ್ರ್ ಹಬ್ಬ ಆಚರಿಸುವ ದಿನದಂದು ನಡೆದ ಘಟನೆಯು ಇಸ್ಲಾಮ್ ಜಗತ್ತಿಗೆ ಶಾಂತಿ, ಸೌಹಾರ್ದತೆ, ತ್ಯಾಗವನ್ನು ನೆನಪಿಸುವ ಮಾನವೀಯತೆಯ ಸಂದೇಶವನ್ನು ನೀಡಿದ್ದಾರೆ. ಇಡೀ ನಾಡು ಹೆಮ್ಮೆಪಡುವಂತಹ ಇವರ ಸೇವೆಯು ಶ್ಲಾಘನೀಯ ಎಂದು ಮಹಾ ವೇದಿಕೆ ಇದರ ಜಿಲ್ಲಾ ಉಪಾಧ್ಯಕ್ಷ ಶ್ರೀ ವಿಷ್ಣು ಮೂರ್ತಿ ಭಟ್ ಅಭಿಪ್ರಾಯಪಟ್ಟರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮದರಂಗಿ ಸಂಪಾದಕ ಡಿಐ ಅಬೂಬಕ್ಕರ್ ಕೈರಂಗಳ, ಸಂಚಾಲಕ ಸಲೀಂ ಮೇಘ, ಮೀಡಿಯಾ ಸಂಚಾಲಕ ಅಶ್ರಫ್ ಸಖಾಫಿ ಕುರ್ನಾಡ್, ಉಪಾಧ್ಯಕ್ಷ ಮುನೀರ್ ಅಸೈಗೋಳಿ, ಕೋಶಾಧಿಕಾರಿ ಸಿದ್ದೀಖ್ ಕೊಳಕೆ, ಸದಸ್ಯ ಲತೀಫ್ ಕೊಳಕೆ ಮುಹಮ್ಮದ್ ಅಲೀ ವಳವೂರು, ಸ್ಥಳೀಯ ಜನ ಪ್ರತಿನಿಧಿ ಇಖ್ಬಾಲ್ ಗೂಡಿನಬಳಿ ಹಿರಿಯ ನೆತ್ರಾವತಿ ವೀರ ಎಂಕೆ ಹೈದರ್ ಹಾಜಿ ಹಾಗೂ ಕಾರ್ಯದರ್ಶಿ ನಿಸಾರ್ ಮಾರಿಪಳ್ಳ ಮಾತನಾಡಿದರು ಪ್ರಾರಂಭದಲ್ಲಿ ಸಮೀತಿಯ ಸಲಹೆಗಾರ ಆರ್ ಕೆ ಮದನಿ ಅಮ್ಮೆಂಬಳ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.