ಮಂಗಳೂರು (www.vknews.com) : ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಸಂಘ (ಸಿಐಟಿಯು) ದಿನಾಂಕ 26-05-2020ರಂದು ರಾಜ್ಯವ್ಯಾಪಿ ಪ್ರತಿಭಟನಾ ಪ್ರದರ್ಶನ ನಡೆಸಿ ರಾಜ್ಯ ಸರಕಾರಕ್ಕೆ ಮನವಿ ನೀಡಲು ಕರೆ ನೀಡಿದ್ದು ದ.ಕ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಯವರಿಗೆ ಮನವಿ ನೀಡಲಾಯಿತು.
ಕೊರೊನಾ ವೈರಸ್ ತಡೆಗಟ್ಟಲು ಲಾಕ್ಡೌನ್ ಅವಧಿಯಲ್ಲಿ ಅಕ್ಷರದಾಸೋಹ ನೌಕರರು ಕೆಲಸವಿಲ್ಲದೆ, ವೇತನವಿಲ್ಲದೆ ತೊಂದರೆಗೊಳಗಾಗಿದ್ದರು. ಮಾತ್ರವಲ್ಲದೆ ಈ ಅವಧಿಯಲ್ಲಿ ಕ್ವಾರಂಟೈನ್ಗಳಲ್ಲಿ ಅಡುಗೆ ಮಾಡಿ ಊಟ ಬಡಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಅವರಿಗೆ ವಿಶೇಷ ವೇತನವಾಗಲೀ ರಾಜ್ಯ ಸರಕಾರ ನೀಡಿಲ್ಲ. ಆದುದರಿಂದ ಈ ಕೆಳಗಿನ ಬೇಡಿಕೆಗಳನ್ನು ಒತ್ತಾಯಿಸಲಾಗಿದೆ.
ಬಿಸಿಯೂಟ ನೌಕರರ ಕೆಲಸ ಖಾಯಂ ಆಗಬೇಕು, ಕೊರೊನಾ ಸಂದರ್ಭದಲ್ಲಿ ಮಾಡಿದ ಕೆಲಸಕ್ಕೆ ವೇತನ ನೀಡಬೇಕು, ಮಾನ್ಯ ಮುಖ್ಯಮಂತ್ರಿಗಳು ಅಸಂಘಟಿತ ಕಾರ್ಮಿಕರಿಗೆ ಘೋಷಣೆ ಮಾಡಿದ ಆರ್ಥಿಕ ಪರಿಹಾರ ಈ ನೌಕರರಿಗೂ ವಿತರಣೆ ಆಗಬೇಕು, ಬಿಸಿಯೂಟ ಕಾರ್ಮಿಕರಿಗೆ ರಾಜ್ಯಾದ್ಯಂತ ಅತೀ ಅವಶ್ಯವಿರುವ ಆಹಾರ ಸಾಮಾಗ್ರಿಗಳನ್ನು ಮತ್ತು ವಸ್ತುಗಳನ್ನು ನೀಡಬೇಕು, ಈ ಮಹಿಳಾ ಕಾರ್ಮಿಕರಿಗೆ ತಿಂಗಳಿಗೆ (ಏಪ್ರಿಲ್ – ಮೇ) ರೂ. 6000 ವೇತನ ನೀಡಬೇಕು, ಈ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡುವ ದೃಷ್ಠಿಯಿಂದ ಪ್ರವೇಶ ಶುಲ್ಕ ಮತ್ತು ಇತರೆ ಶುಲ್ಕಗಳ ಸಂಪೂರ್ಣ ವಿನಾಯಿತಿ ನೀಡಬೇಕು ಮತ್ತು ಈ ಕಾರ್ಮಿಕರಿಗೆ ಮತ್ತು ಅವರ ಕುಟುಂಬಗಳು ತುತ್ತಾದಾಗ ಉಚಿತ ಆರೋಗ್ಯ ಸೌಲಭ್ಯ ನೀಡಬೇಕೆಂಬ ಬೇಡಿಕೆಗಳನ್ನು ಒತ್ತಾಯಿಸಲಾಗಿದೆ. ನಿಯೋಗದಲ್ಲಿ ಜಿಲ್ಲಾಧ್ಯಕ್ಷರಾದ ಪದ್ಮಾವತಿ ಶೆಟ್ಟಿ, ಖಜಾಂಚಿ ಭವ್ಯ, ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾದ ರತ್ನಮಾಲರವರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.