ಧಾರವಾಡ (www.vknews.com) : ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಸದಸ್ಯರಾಗಿ ನಗರದ ಕೃಷಿಕ ಮತ್ತು ಹಿರಿಯ ವರ್ತಕ ಬಸವರಾಜ ರಾಚಯ್ಯಸ್ವಾಮಿ ವಸ್ತ್ರದ ನೇಮಕಗೊಂಡಿದ್ದಾರೆ. ರಾಜ್ಯ ಸರಕಾರದ ಸಹಕಾರ ಇಲಾಖೆಯ ಅಧೀನ ಕಾರ್ಯದರ್ಶಿ ಕೆ. ಮಂಜುನಾಥ ಅವರು ರಾಜ್ಯ ಎ.ಪಿ.ಎಂ.ಸಿ. ಅಧಿನಿಯಮ 1996ರ ಕಲಂ 11(1)-9ರ ಮೇರೆಗೆ ಸರಕಾರದ ಪರವಾಗಿ ನಾಮನಿರ್ದೇಶನಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬಸವರಾಜ ವಸ್ತ್ರದ ಅವರ ನೇಮಕಕ್ಕೆ ಶ್ರಮಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶಾಸಕರುಗಳಾದ ಅರವಿಂದ ಬೆಲ್ಲದ ಹಾಗೂ ಅಮೃತ ದೇಸಾಯಿ ಅವರಿಗೆ ಧಾರವಾಡ ವರ್ತಕರ ಸಂಘದ ಅಧ್ಯಕ್ಷ ಅಶೋಕ ದೊಡಮನಿ, ಮಹಾಂತೇಶ ಪಟ್ಟಣಶೆಟ್ಟಿ ಹಾಗೂ ಹಿರಿಯ ವರ್ತಕ ರವೀಂದ್ರ ವಸ್ತ್ರದ ಕೃತಜ್ಞತೆ ಸಲ್ಲಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.