ಬಂಟ್ವಾಳ(www.vknews.in):, ಮೇ.28: ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಸಾಲೆತ್ತೂರು ಗ್ರಾಮದ ಅಪ್ರಾಪ್ತ ಬಾಲಕನ ಮೇಲೆ ನಡೆದ ಹಲ್ಲೆ ಘಟನೆಯನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ವಿಟ್ಲ ವಲಯಾಧ್ಯಕ್ಷ ಝಕರಿಯಾ ಗೋಲ್ತಮಜಲ್ ತೀವ್ರವಾಗಿ ಖಂಡಿಸಿದ್ದಾರೆ.
ಬಾಲಕನ ಮೇಲೆ ಹಲ್ಲೆ ನಡೆಸಿದ್ದು ಮಾತ್ರವಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿ ಧಾರ್ಮಿಕ ಅವಹೇಳನಗೈದ ಸಂಘಪರಿವಾರದ ದುಷ್ಕರ್ಮಿಗಳು ಅನೈತಿಕ ಪೊಲೀಸ್ ಗಿರಿಯನ್ನು ಮೆರೆದಿದ್ದಾರೆ. ಮಾತ್ರವಲ್ಲದೇ, ಇದು ಶಾಂತಿಯುತವಾಗಿರುವ ಜಿಲ್ಲೆಯಲ್ಲಿ ಕೋಮು ಸಂಘರ್ಷವನ್ನು ಸೃಷ್ಟಿಸುವ ಹುನ್ನಾರವಾಗಿದೆ.
ಘಟನೆಯಲ್ಲಿ ನೇರವಾಗಿ ಭಾಗಿಯಾಗಿರುವ ಸಂಘ ಪರಿವಾರದ ದಿನೇಶ್ ಮರ್ತನಾಡಿ ಮತ್ತು ಆತನ ಸಹಚರರ ಮೇಲೆ ಪೊಲೀಸ್ ಇಲಾಖೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿರುವ ಝಕರಿಯಾ ಗೋಲ್ತಮಜಲು, ಕೊರೋನದಂತಹ ಬಿಕ್ಕಟ್ಟಿನ ಸಂದರ್ಭದಲ್ಲೂ ಸಮಾಜದ ಸ್ವಾಸ್ಥ್ಯ ಕೆಡಿಸುವಂತಹ ಸಂಘಪರಿವಾರದ ಇಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.