(www.vknews.com) : ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಸಾಲೆತ್ತೂರು ಗ್ರಾಮದ ಅಪ್ರಾಪ್ತ ಬಾಲಕನ ಮೇಲೆ ನಡೆದ ಹಲ್ಲೆ ಘಟನೆಯನ್ನು ಆಲ್ ಇಂಡಿಯಾ ಮುಸ್ಲಿಂ ಡೆವಲಪ್ಮೆಂಟ್ ಫೋರಂ ತೀವ್ರವಾಗಿ ಖಂಡಿಸುತ್ತದೆ ಎಂದು ಇದರ ರಾಜ್ಯ ಉಪಾಧ್ಯಕ್ಷರಾದ ಎಸ್.ಅಬೂಬಕ್ಕರ್ ಸಜೀಪ ತಿಳಿಸಿದ್ದಾರೆ.
ಬಾಲಕನ ಮೇಲೆ ಹಲ್ಲೆ ನಡೆಸಿದ್ದು ಮಾತ್ರವಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿ ಧಾರ್ಮಿಕ ಅವಹೇಳನಗೈದ ಸಂಘಪರಿವಾರದ ದುಷ್ಕರ್ಮಿಗಳು ಅನೈತಿಕ ಪೊಲೀಸ್ ಗಿರಿಯನ್ನು ಮೆರೆದಿದ್ದಾರೆ. ಮಾತ್ರವಲ್ಲದೇ, ಇದು ಶಾಂತಿಯುತವಾಗಿರುವ ಜಿಲ್ಲೆಯಲ್ಲಿ ಕೋಮು ಸಂಘರ್ಷವನ್ನು ಸೃಷ್ಟಿಸುವ ಹುನ್ನಾರವಾಗಿದೆ.
ಘಟನೆಯಲ್ಲಿ ನೇರವಾಗಿ ಭಾಗಿಯಾಗಿರುವ ಸಂಘ ಪರಿವಾರದ ದಿನೇಶ್ ಮರ್ತನಾಡಿ ಮತ್ತು ಆತನ ಸಹಚರರ ಮೇಲೆ ಪೊಲೀಸ್ ಇಲಾಖೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿರುವ ಎಸ್.ಅಬೂಬಕ್ಕರ್ ಸಜೀಪ ಇವರು ಸಮಾಜದ ಸ್ವಾಸ್ಥ್ಯವನ್ನು ಕೆಡಿಸಿ ಜಿಲ್ಲೆಯಲ್ಲಿ ಕೋಮುಗಳಭೆಗಳನ್ನು ಸೃಷ್ಠಿಸಲು ಹಾತೊರೆಯುತ್ತಿರುವ ಸಂಘಪರಿವಾರದ ಇಂತಹ ಕೃತ್ಯಗಳನ್ನು ಮಟ್ಟಹಾಕಿ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಶಿಕ್ಷೆಗೆ ಗುರಿಪಡಿಸುವ ಮುಖಾಂತರ ಜಿಲ್ಲೆಯಲ್ಲಿ ಕೋಮುಸಾಮರಸ್ಯಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.