ಚಿಕ್ಕಬಳ್ಳಾಪುರ (ವಿಶ್ವ ಕನ್ನಡಿಗ ನ್ಯೂಸ್) : ಕೊರೋನಾ ಎಂಬ ಮಹಾಮಾರಿಯಿಂದ ಸರ್ಕಾರ ಸೂಚಿಸಿದ್ದ ಲಾಕ್ ಡೌನ್ ನಿಂದ ಮಧ್ಯಮ ವರ್ಗದವರಾದ ಮಹಿಳಾ ಬ್ಯೂಟಿಷಿಯನ್ ಹಾಗೂ ಟೈಲರ್ಗಳಿಗೆ ಆರ್ಥಿಕ ಸಮಸ್ಯೆಯುಂಟಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಬ್ಯೂಟಿಷಿಯನ್ ಹಾಗೂ ಟೈಲರ್ ಅಸೋಸಿಯೇಷನ್ ಪದಾಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರನ್ನು ಭೇಟಿ ಮಾಡಿ ಅವರಿಗೆ ಆದ ಸಮಸ್ಯೆಗಳನ್ನು ಹಾಗೂ ಇನ್ನಿತರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ಈಡೇರಿಸಿಕೊಡಲು ಮನವಿ ಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಎಸ್.ಪಿ.ಶ್ರೀನಿವಾಸ್, ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಕೃಷ್ಣ, ಎನ್.ಎಸ್.ಯು.ಐ ರಾಜ್ಯ ಸಂಚಾಲಕ ಮುನೀಂದ್ರ, ಎನ್.ಎಸ್.ಯು.ಐ ತಾಲ್ಲೂಕು ಅಧ್ಯಕ್ಷ ಅನಿಲ್ ಮತ್ತು ಆದಿನಾರಾಯಣ ಹಾಗೂ ಟೈಲರಿಂಗ್ ಅಸೋಸಿಯೇಷನ್ ಪದಾಧಿಕಾರಿಗಳು ಹಾಜರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.