(www.vknews.com) : ಮಹಾ ಮಾರಿ ಕೋವಿಡ್ ಆತಂಕಕಾರಿ ಯಾಗಿ ದಿನೇ ದಿನೇ ಹೆಚ್ಚುತ್ತಿರುವ ಸಂದರ್ಭದಲ್ಲಿ ನಿತ್ಯ ಜನರ ಮಧ್ಯೆ ಇದ್ದು ಕೊಂಡು, ತಮ್ಮ ಜೀವದ ಹಂಗು ತೊರೆದು ಹಗಲು-ರಾತ್ರಿ ಕರ್ತವ್ಯ ನಿರ್ವಹಿಸುತ್ತಿರುವ ಮಂಗಳೂರು ಕಮಿಷನರೇಟ್ ವಲಯದ ಸುಮಾರು 2000 ಪೊಲೀಸ್ ಸಿಬ್ಬಂದಿಗಳಿಗೆ ತಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಕೊಳ್ಳಲು ಆಯುಷ್ ಮಂತ್ರಾಲಯ ಸೂಚಿಸಿದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಹೋಮಿಯೋಪತಿ ಔಷಧಿ ಯನ್ನು ಇಂದು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಾಂಕೇತಿಕವಾಗಿ ಹಸ್ತಾಂತರ ಮಾಡಲಾಯಿತು.
ಈಗಾಗಲೇ ಜಿಲ್ಲೆಯ ತಾಲೂಕುವಾರು ಪೊಲೀಸ್ ಸಿಬ್ಬಂದಿಗಳಿಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಭಾರತೀಯ ಹೋಮಿಯೋಪತಿ ವೈದ್ಯರ ಸಂಘದ ವತಿಯಿಂದ 950ರಷ್ಟು ಉಚಿತ ಹೋಮಿಯೋಪತಿ ರೋಗ ನಿರೋಧಕ ಔಷಧಿಯನ್ನು ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಹಸ್ತಾಂತರ ಮಾಡಿದ್ದು, ಈ ಮೂಲಕ ಸಮಸ್ತ ದ.ಕ ಜಿಲ್ಲೆಯ ಪೊಲೀಸ್ ಸಿಬ್ಬಂದಿಗಳಿಗೆ ಔಷಧಿಯನ್ನು ತಲುಪಿಸುವ ತಮ್ಮ ಗುರಿ ನೆರವೇರಿದ್ದು, ಇದು ಪೊಲೀಸರ ನಿಸ್ವಾರ್ಥ ಸೇವೆಗೆ ಸಂಘದ ಒಂದು ಕಿರುಕಾಣಿಕೆ ಎಂದು ಐಎಚ್ಎಂಎ ಮಂಗಳೂರು ಘಟಕದ ಅಧ್ಯಕ್ಷರಾದ ಡಾ. ಪ್ರವೀಣ್ ಕುಮಾರ್ ರೈ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಭಾರತೀಯ ಹೋಮಿಯೋಪತಿ ವೈದ್ಯರ ಸಂಘದ ಅಧ್ಯಕ್ಷರಾದ ಡಾ. ಪ್ರವೀಣ್ ಕುಮಾರ್ ರೈ, ಡಾ. ಪ್ರವೀಣರಾಜ್ ಆಳ್ವ, ಪ್ರಾಂಶುಪಾಲರು ಆಳ್ವಾಸ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜು ಮೂಡಿಬಿದರೆ ಹಾಗೂ ಡಾ. ರಾಮ ಕೃಷ್ಣ ರಾವ್, ನಿಕಟ ಪೂರ್ವ ಅಧ್ಯಕ್ಷರು ಐಎಚ್ಎಂಎ ಮಂಗಳೂರು ಹಾಗೂ RSI ಅನು ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.