ಬೆಂಗಳೂರು (www.vknews.com) : ಕೊರೊನಾ ವಿರುದ್ಧದ ಹೋರಾಟದ ಈ ಸಂದರ್ಭದಲ್ಲಿ ಎಲ್ಲರೂ ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿರುವಾಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವ ಬದಲು ಏರಿಕೆ ಮಾಡುವುದು ಸರಿಯಲ್ಲ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಅಧ್ಯಕ್ಷರು ಅಡ್ವೊಕೇಟ್ ತಾಹಿರ್ ಹುಸೇನ್ ಹೇಳಿದ್ದಾರೆ.
ಬೆಲೆ ಏರಿಕೆ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
‘ಕೋವಿಡ್–19 ವಿರುದ್ಧದ ಹೋರಾಟವು ಕೋಟ್ಯಂತರ ಸಹೋದರ ಸಹೋದರಿಯರನ್ನು ಆರ್ಥಿಕವಾಗಿ ಕಷ್ಟಕ್ಕೀಡುಮಾಡಿದೆ. ಇಂತಹ ಸಂದರ್ಭದಲ್ಲಿ ಇಂಧನ ದರ ಇಳಿಕೆ ಮಾಡುವ ಬದಲು ಪೆಟ್ರೋಲ್, ಡೀಸೆಲ್ ದರವನ್ನು ಕ್ರಮವಾಗಿ ₹10 ಹಾಗೂ ₹13ರಷ್ಟು ಹೆಚ್ಚಿಸುವ ನಿರ್ಧಾರ ಸರಿಯಲ್ಲ. ಈ ನಿರ್ಧಾರವನ್ನು ಹಿಂಪಡೆಯಬೇಕು’ ಎಂದು ಅವರು ಆಗ್ರಹಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.