ಬೈಂದೂರು ,(ವಿಶ್ವ ಕನ್ನಡಿಗ ನ್ಯೂಸ್ ):ಕಾಲು ಜಾರಿ ನಿರ್ಮಾಣ ಹಂತದ ಬಾವಿಗೆ ಬಿದ್ದು ಮ್ರತ ಪಟ್ಟ ಘಟನೆ ತಾಲೂಕಿನ ನಾಡಾ ಗ್ರಾಮದಲ್ಲಿ ನಡೆದಿದೆ . ಗುಲ್ವಾಡಿ ಗ್ರಾಮದ ಶೆಟ್ರಕಟ್ಟೆ ನಿವಾಸಿ ಲಕ್ಷ್ಮಣ ಪೂಜಾರಿ (38) ಸಾವನ್ನಪ್ಪಿದ ದುರ್ದೈವಿ ಎಂದು ಗುರುತಿಸಲಾಗಿದೆ. ನಾಡಗುಡ್ಡೆಯಂಗಡಿ ಜನತಾ ಕಾಲನಿ ನಿವಾಸಿ ಲಕ್ಷ್ಮೀ ಪೂಜಾರಿಯವರ ಮನೆಯ ಬಾವಿ ನಿರ್ಮಾಣ ಹಂತದಲ್ಲಿತ್ತು ,ಕಾಮಗಾರಿಯನ್ನು ವೀಕ್ಷಿಸುತ್ತಿರುವಾಗ ಕಾಲು ಜಾರಿ ಅದೇ ಬಾವಿಗೆ ಬಿದ್ದಿದ್ದಾರೆ . ಬಾವಿಗೆ ಬಿದ್ದ ಲಕ್ಷ್ಮಣ ಪೂಜಾರಿಯವರನ್ನು ರಕ್ಷಿಸುವ ಪ್ರಯತ್ನ ನಡೆಸಿಲಾಯಿತಾದರೂ ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದರು . ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಮೃತದೇಹವನ್ನು ಮೇಲಕ್ಕೆತ್ತಿದರು .ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.