ಮಂಗಳೂರು (www.vknews.com) : ಸಾಮಾಜಿಕ ಮುಖಂಡ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಯವರು ಇತ್ತೀಚೆಗೆ ಎಸ್ ಡಿ ಪಿ ಐ ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಜಿಲ್ಲಾ ಸಮಿತಿ ಸದಸ್ಯತ್ವಕ್ಕೆ ಸ್ವಯಂ ರಾಜೀನಾಮೆ ನೀಡಿದ್ದು ಇದೀಗ ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ಸಂಘಟನೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ಸಮಾಜ ಸೇವೆಯಲ್ಲಿ ಅತ್ಯುತ್ತಮವಾಗಿ ಪಳಗಿದ ಇವರು ಕೋವಿಡ್-19 ಸಂದರ್ಭದಲ್ಲಿ ಬಡಕುಟುಂಬಕ್ಕೆ ಆಸರೆಯಾಗಿದ್ದರು. ಅದೇ ರೀತಿ ವೈದ್ಯಕೀಯ ನೆರವು ಕೂಡ ನೀಡಿದ್ದರು.
ಇದೀಗ ಕ.ರಾ.ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯ ದ.ಕ.ಜಿಲ್ಲಾ ಸಮಿತಿ ವತಿಯಿಂದ ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಭಾಶ್ ನಗರದಲ್ಲಿ ಎರಡು ಮಕ್ಕಳ ವಿಧವಾ ಮಹಿಳೆಗೆ ಮನೆ ನಿರ್ಮಿಸುತ್ತಿದ್ದು,ಹಾಗೂ ಮತ್ತೊಂದು ಅರ್ಹ ಕುಟುಂಬಕ್ಕೆ ಮನೆ ನಿರ್ಮಿಸಿಕೊಡುವಲ್ಲಿ ಅಪಾರ ಶ್ರಮ ವಹಿಸುತ್ತಿದ್ದಾರೆ. ಇವರ ಮಹತ್ಕಾರ್ಯ ದೊಂದಿಗೆ ದಾನಿಗಳು ಕೈ ಜೋಡಿಸಬೇಕಾಗಿದೆ.
ಕರ್ನಾಟಕ ರಾಜ್ಯ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಶಾನವಾಝ್ ಮುಲ್ಲಾ ಅವರು ದ.ಕ.ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಮಿತ್ತ ಮಂಗಳೂರಿಗೆ ಭೇಟಿ ನೀಡಿದಾಗ ಇಸ್ಮಾಯಿಲ್ ಶಾಫಿ ಅವರ ಮನೆಗೆ ಭೇಟಿ ನೀಡಿದ್ದಾರೆ.
ಬಳಿಕ ಮಾತನಾಡಿದ ಶಾನವಾಝ್ ಮುಲ್ಲಾ” ನಮ್ಮ ಆತ್ಮೀಯರಾರ ಕ.ರಾ.ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆಯ ಜಿಲ್ಲಾಧ್ಯಕ್ಷ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಅವರ ಮನೆಗೆ ಭೇಟಿ ನೀಡಿ ಅವರ ಜೊತೆ ಕಳೆದ ಸಮಯ ಅವಿಸ್ಮರಣೀಯವಾಗಿದೆ. ಶಾಫಿ ಬಬ್ಬುಕಟ್ಟೆ ಅವರು ಒಬ್ಬ ಉತ್ತಮ ಸಾಮಾಜಿಕ ಕಾರ್ಯಕರ್ತರಾಗಿ ಹೊರಹೊಮ್ಮುತ್ತಿದ್ದು ಅಲ್ಲಾಹು ಅವರಿಗೆ ಒಳ್ಳೆಯ ಆರೋಗ್ಯ ಆಯುಷ್ಯ ನೀಡಲಿ ಮತ್ತು ಕೆಲಸ ಕಾರ್ಯಗಳಲ್ಲಿ ಯಶಸ್ಸು ನೀಡಲಿ ಎಂದು ಪ್ರಾರ್ಥಿಸಿ ರಾಜಕೀಯವಾಗಿ ಮುಂದೆ ಬಂದು ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ನಮ್ಮೊಂದಿಗೆ ಸಕ್ರಿಯವಾಗಿ ಕಾರ್ಯಾಚರಿಸುವಂತಾಗಲಿ “ಎಂದು ಹಾರೈಸಿದರು.
ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಾಹಾ ವೇದಿಕೆ ದ.ಕ.ಜಿಲ್ಲಾಧ್ಯಕ್ಷ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಮಾತನಾಡಿ ” ಕರ್ನಾಟಕ ರಾಜ್ಯ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಶಾನವಾಝ್ ಮುಲ್ಲಾ ಅವರು ನಮ್ಮ ಮನೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ್ದು ತುಂಬಾ ಸಂತೋಷವಾಗಿದೆ. ನನ್ನಂಥಾ ಸಮಾಜ ಸೇವಕನ ಮನೆಗೆ ಬಂದು ಸ್ವಲ್ಪ ಸಮಯ ಕಳೆದು ನಮ್ಮ ಕಾರ್ಯಗಳ ಬಗ್ಗೆ ವಿಚಾರಿಸಿ ಸಲಹೆ ಸೂಚನೆಗಳನ್ನು ನೀಡಿರುವುದು ಮುಂದಿನ ಚಟುವಟಿಕೆಗಳಿಗೆ ಉತ್ತೇಜನ ನೀಡಿದಂತಾಗಿದೆ. ಶಾನವಾಝ್ ಮುಲ್ಲಾ ಅವರು ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ಬಗ್ಗೆ ಚಿಂತನೆಯುಳ್ಳ ಮಾದರಿ ರಾಜಕೀಯ ಮುಖಂಡರಾಗಿದ್ದಾರೆ.
ಇವರು ರಾಜಕೀಯವಾಗಿ ಇನ್ನಷ್ಟು ಮುಂದೆ ಬರಬೇಕು. ಅವರ ರಾಜಕೀಯ ಭವಿಷ್ಯ ಉಜ್ವಲವಾಗಲಿ. ಮುಲ್ಲಾ ಅವರು ನನಗೆ ಸಮಾಜ ಸೇವೆ ಮಾಡಲು ಪ್ರೇರಣೆ ನೀಡಿ ನನ್ನ ಎಲ್ಲಾ ಕೆಲಸಕಾರ್ಯಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮುಂದೆಯೂ ಸಮಾಜ ಸೇವೆ ಮಾಡುತ್ತೇನೆ ” ಎಂದರು.
ರಾಜ್ಯದಲ್ಲಿ ಇದೀಗ ಘರ್ ವಾಪಸಿ ನಡೆಯುತ್ತಿದ್ದು ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಅವರನ್ನು ಮರಳಿ ಮಾತೃ ಪಕ್ಷಕ್ಕೆ ಆಹ್ವಾನಿಸಿರುವ ಶಾನವಾಝ್ ಮುಲ್ಲಾ, ಸುದೀರ್ಘ ರಾಜಕೀಯ ಚರ್ಚೆ ನಡೆಸಿದ್ದಾರೆ.
ನಾಸಿರ್ ಚಿಕ್ಕಮಗಳೂರು, ರಹೀಂ, ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾ ವೇದಿಕೆ ದ.ಕ.ಜಿಲ್ಲಾ ಉಪಾಧ್ಯಕ್ಷ ಮುನೀರ್ ಅಸೈಗೋಳಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.