ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ವಿಶ್ವ ಆರೋಗ್ಯ ಸಂಸ್ಥೆಯು ರಕ್ತದಾನ ಕುರಿತು ಜನರಲ್ಲಿಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಜೂನ್ 14ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸುತ್ತದೆ.
ಯಾರಿರಲಿ, ಎಂತಿರಲಿ ಎಲ್ಲರ ದೇಹದಲ್ಲೂ ಇರುವ ರಕ್ತ ಒಂದೇ ಅಲ್ಲವೇ? ಹೌದು, ಜಗತ್ತಿನೆಲ್ಲೆಡೆ ಪ್ರತಿ ಕ್ಷಣ ಲೆಕ್ಕವಿಲ್ಲದಷ್ಟು ಮಂದಿ ರಕ್ತದ ಅಗತ್ಯದಲ್ಲಿರುತ್ತಾರೆ; ಸಾವಿರಾರು ಮಂದಿ ತಮಗೆ ಬೇಕಾದವರಿಗೆ ಬೇಕಿರುವ ರಕ್ತವನ್ನು ಹುಡುಕಿಕೊಂಡು ಆತಂಕದಿಂದ ಅಲೆಯುತ್ತಿರುತ್ತಾರೆ. ರಕ್ತ ಅಕ್ಷರಶಃ ಜೀವದ್ರವ್ಯ.
ಅಪಘಾತ, ಕ್ಯಾನ್ಸರ್, ಹೃದಯಸಂಬಂಧಿ ಸಮಸ್ಯೆಗಳು, ಹೆರಿಗೆ ಸಂಬಂಧಿ ಚಿಕಿತ್ಸೆಯ ವೇಳೆ ವ್ಯಾಪಕವಾಗಿ ರಕ್ತ ಬೇಕಾಗುತ್ತದೆ. ಆದರೆ, ಭಾರತವೂ ಸೇರಿದಂತೆ ಇಡೀ ವಿಶ್ವದಾದ್ಯಂತ ಬೇಡಿಕೆಗೆ ತಕ್ಕಂತೆ ರಕ್ತದ ಪೂರೈಕೆಯಿಲ್ಲ. ಹೀಗಾಗಿ ಬದುಕುವ ಎಲ್ಲ ಅವಕಾಶಗಳಿದ್ದರೂ ಎಷ್ಟೋ ಜೀವಗಳು ರಕ್ತದ ಕೊರತೆಯಿಂದಾಗಿ ಆಸ್ಪತ್ರೆಗಳಲ್ಲಿಅಸು ನೀಗಿವೆ. ಈ ಹಿನ್ನೆಲೆಯಲ್ಲಿವಿಶ್ವದ ಬಹುತೇಕ ರಾಷ್ಟ್ರಗಳ ಸರಕಾರಗಳು, ಅಂತಾರಾಷ್ಟ್ರೀಯ ಮತ್ತು ಸ್ಥಳೀಯ ಸಂಘ ಸಂಸ್ಥೆಗಳು ರಕ್ತದಾನದ ಬಗ್ಗೆ ಜನರಲ್ಲಿಜಾಗೃತಿ ಮೂಡಿಸಲು ಪ್ರಯತ್ನಿಸುತ್ತಿವೆ. ರಕ್ತದಾನ ಮಾಡಲು ದುಡ್ಡು ಬೇಕಾಗಿಲ್ಲ. ಅದಕ್ಕೆ ಬೇಕಾಗಿರುವುದು ಒಂದು ಜೀವಕ್ಕೆ ಮಿಡಿಯುವ ದೊಡ್ಡ ಮನಸ್ಸಷ್ಟೆ.
ಬ್ಲಡ್ ಡೋನರ್ಸ್ ಮಂಗಳೂರು ರಿ ತಂಡವು ಕಳೆದ ಏಳು ವರ್ಷಗಳಿಂದ ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸುತ್ತಿದೆ. ಈ ದಿನದಲ್ಲಿ ವಿಶೇಷವಾಗಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಅಥವಾ ರಕ್ತದಾನ ಶಿಬಿರ ಆಯೋಜಿಸುವ ಮೂಲಕ ಆಚರಿಸುತ್ತಿದೆ.
ಪ್ರತಿವರ್ಷದಂತೆ ಈ ವರ್ಷವೂ ಎರಡು ರಕ್ತದಾನ ಶಿಬಿರಗಳು ಆಯೋಜಿಸಿದ್ದು ಒಂದು ಶಿಬಿರವು ಸೌದಿಅರೇಬಿಯಾದ ದಮ್ಮಾಂ ನಲ್ಲಿ ಆಯೋಜಿಸಿದರೆ, ಇನ್ನೊಂದು ಶಿಬಿರವು ಪುತ್ತೂರಿನ ಕುಂಬ್ರದಲ್ಲಿ ಜರುಗಲಿದೆ
14ರಂದೇ ಯಾಕೆ ಆಚರಣೆ? ವಿಶ್ವ ಆರೋಗ್ಯ ಸಂಸ್ಥೆಯು ರಕ್ತದಾನ ಕುರಿತು ಜನರಲ್ಲಿಜಾಗೃತಿ ಮೂಡಿಸುವ ನಿಟ್ಟಿನಲ್ಲಿಪ್ರತಿ ವರ್ಷ ಜೂನ್ 14ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸುತ್ತದೆ. ಇದಲ್ಲದೆ, ಆಸ್ಟ್ರಿಯಾ ವೈದ್ಯ ಕಾರ್ಲ್ ಲ್ಯಾಂಡ್ಸ್ಟೇನರ್ ಅವರು ಮಾನವನ ರಕ್ತದ ಮೊದಲ ಮೂರು ಗ್ರೂಪ್ಗ್ಳನ್ನು ಸಂಶೋಧಿಸಿದರು. ಈ ಹಿನ್ನೆಲೆಯಲ್ಲೂ ಅವರ ಜನ್ಮದಿನವಾದ ಜೂನ್ 14 ಅನ್ನು ವಿಶ್ವ ರಕ್ತದಾನಿಗಳ ದಿನವನ್ನಾಗಿ ಆಚರಿಸಲಾಗುತ್ತದೆ.
ಭಾರತದಲ್ಲಿ ರಕ್ತ ಅಗತ್ಯತೆ: ಭಾರತದಲ್ಲಿಪ್ರತಿ ವರ್ಷ 5 ಕೋಟಿ ಯೂನಿಟ್ ರಕ್ತ ಬೇಕಾಗುತ್ತದೆ. ಆದರೆ, ಕೇವಲ 2.5 ಕೋಟಿ ಯೂನಿಟ್ ಮಾತ್ರ ರಕ್ತ ಲಭ್ಯವಾಗುತ್ತದೆ. ರಕ್ತದಾನವೆಂದರೆ ಅದು ಜೀವದಾನ. ಇದಕ್ಕೆ ಬೇರೆ ಯಾವುದೇ ಪರ್ಯಾಯ ಮಾರ್ಗವಿಲ್ಲ ದೇಶದಲ್ಲಿಪ್ರತಿ 2 ಸೆಕೆಂಡ್ಗೆ ಯಾರಿಗಾದರೂ ರಕ್ತದ ಅಗತ್ಯ ಬಿದ್ದೇ ಬೀಳುತ್ತದೆ.
ಪ್ರತಿ ವರ್ಷ ಅಂದಾಜು 3 ಕೋಟಿ ರಕ್ತದ ಘಟಕಗಳನ್ನು ಪೂರಣ ಮಾಡಲಾಗುತ್ತದೆ. ರಕ್ತಪೂರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗಳಿಂದ ಹೆಚ್ಚಾಗಿ ಬೇಡಿಕೆ ಬರುವುದು ಒ ಗುಂಪಿನ ರಕ್ತಕ್ಕೆ ಸಿಕ್ಲ್ ಸೆಲ್ ರೋಗಿ(ರಕ್ತಕ್ಕೆ ಸಂಬಂಧಿಸಿದ ಕಾಯಿಲೆ)ಗಳಿಗೆ ಅವರ ಜೀವನಪರ್ಯಂತ ರಕ್ತಪೂರಣ ಮಾಡಲೇಬೇಕು.
ಪ್ರತಿ ವರ್ಷ ಭಾರತದಲ್ಲಿಅಂದಾಜು 10 ಲಕ್ಷ ಜನರಿಗೆ ಕ್ಯಾನ್ಸರ್ ಪತ್ತೆಯಾಗುತ್ತದೆ. ಈ ಜನರ ಪೈಕಿ ಹೆಚ್ಚಿನವರಿಗೆ ಕೆಲವೊಮ್ಮೆ ಆಗಾಗ, ದಿನನಿತ್ಯ, ಕಿವೋಥೆರಪಿ ಮಾಡುವಾಗ ರಕ್ತಪೂರಣ ಮಾಡಲೇಬೇಕಾಗುತ್ತದೆ.
ಯಾರು ಮಾಡಬಹುದು? 18ರಿಂದ 60 ವರ್ಷದವರೆಗಿನ ಆರೋಗ್ಯವಂತ ವ್ಯಕ್ತಿಗಳು ಯಾರು ಬೇಕಾದರೂ ರಕ್ತದಾನ ಮಾಡಬಹುದು. ದಾನಿಗಳ ದೇಹದ ತೂಕ 45 ಕೆ.ಜಿ. ಮೇಲ್ಪಟ್ಟಿದ್ದು, ಹಿವೋಗ್ಲೋಬಿನ್ ಅಂಶ 12.5 ಗ್ರಾಮ್ಗಿಂತ ಹೆಚ್ಚಿರಬೇಕು. ರಕ್ತದ ಒತ್ತಡ ಸಾಮಾನ್ಯವಾಗಿರಬೇಕು. ಅಂದರೆ ಸಿಸ್ಟೋಲಿಕ್ ರಕ್ತದ ಒತ್ತಡ 100ರಿಂದ 140 ಹಾಗೂ ಡಯಾಸ್ಟೊಲಿಕ್ ಒತ್ತಡ 70ರಿಂದ 100 ಇರಬೇಕು.
45ರಿಂದ 60 ಕೆ.ಜಿ. ತೂಕದ ದಾನಿಗಳಿಂದ 350 ಎಂಎಲ್ ರಕ್ತವನ್ನು ಹಾಗೂ 60 ಕೆ.ಜಿ.ಗೂ ಹೆಚ್ಚು ತೂಕ ಹೊಂದಿರುವ ದಾನಿಗಳಿಂದ 450 ಎಂಎಲ್ ರಕ್ತವನ್ನು ದಾನವಾಗಿ ಪಡೆಯಲಾಗುವುದು.
ಆರೋಗ್ಯವಂತ ಗಂಡಸರು 3 ತಿಂಗಳಿಗೊಮ್ಮೆ, ಮಹಿಳೆಯರು ನಾಲ್ಕು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದುಯಾರು ಮಾಡಬಾರದು?
ಅನಾರೋಗ್ಯ ಪೀಡಿತರು, ನಿರಂತರ ಔಷಧ ಸೇವಿಸುವರು. ಎಚ್ಐವಿ/ಏಡ್ಸ್ ಸೋಂಕಿತರು, ಕ್ಯಾನ್ಸರ್ ರೋಗಿಗಳು, ಸಾಂಕ್ರಾಮಿಕ ರೋಗ ಹೊಂದಿರುವವರು, ಹೃದ್ರೋಗಿಗಳು, ಕ್ಷಯ ರೋಗಿಗಳು, ಲಿವರ್ ಮತ್ತು ಕಿಡ್ನಿ ಸಮಸ್ಯೆ ಹೊಂದಿರುವವರು, ಮಧುಮೇಹಿಗಳು, ಹೆಪಟೈಟಿಸ್ ‘ಬಿ’ ಸೋಂಕಿತರು, ಮಾದಕ ವ್ಯಸನಿಗಳು, ಕಡಿಮೆ ತೂಕ ಹಾಗೂ ಹಿವೋಗ್ಲೋಬಿನ್ ಕೊರತೆಯಿಂದ ಬಳಲುತ್ತಿರುವವರು, ಗರ್ಭಿಣಿಯರು, ರಕ್ತದಾನ ಮಾಡುವಂತಿಲ್ಲ.
ಬದಲಿ ರಕ್ತ ಹಾಕಿಸಿಕೊಂಡವರು ಹಾಗೂ ಮೈ ಕೈ ಮೇಲೆ ಹಚ್ಚೆ (ಟ್ಯಾಟೂ) ಹಾಕಿಸಿಕೊಂಡವರು 6 ತಿಂಗಳ ಕಾಲ ರಕ್ತದಾನ ಮಾಡುವಂತಿಲ್ಲ.
ಶಸ್ತ್ರಚಿಕಿತ್ಸೆಗೆ ಒಳಗಾದವರು, ಟೈಫಾಯ್ಡ , ರಕ್ತಹೀನತೆ, ಮಲೇರಿಯಾ, ರೇಬಿಸ್ ಲಸಿಕೆ ಹಾಕಿಸಿಕೊಂಡವರು, ಶಿಶುಗಳಿಗೆ ಹಾಲುಣಿಸುವ ತಾಯಂದಿರು ಒಂದು ವರ್ಷ ಕಾಲ ರಕ್ತದಾನ ಮಾಡುವಂತಿಲ್ಲ.
ಕಾಲರಾ, ಟೈಫಾಯಿಡ್, ಪ್ಲೇಗ್ ಸೇರಿದಂತೆ ಸಾಂಕ್ರಾಮಿಕ ಕಾಯಿಲೆಯಿಂದ ಬಳಲುತ್ತಿರುವವರು 15 ದಿನಗಳಿಂದ ಒಂದು ತಿಂಗಳವರೆಗೆ ರಕ್ತದಾನ ಮಾಡುವಂತಿಲ್ಲ.
ರಕ್ತದಾನದ ಉಪಯೋಗಗಳು: ದಾನಿಗಳು ಒಮ್ಮೆ ರಕ್ತ ದಾನ ಮಾಡಿದರೆ ಮುಂದಿನ ಮೂರು ತಿಂಗಳವರೆಗೆ ದಾನ ಮಾಡಬಾರದು. ರಕ್ತದಾನ ಮಾಡುವುದರಿಂದ ದೇಹದಲ್ಲಿಹೊಸ ರಕ್ತ ಉತ್ಪತ್ತಿ ಆಗುತ್ತದೆ. ಅಲ್ಲದೆ ಉತ್ತಮ ಆರೋಗ್ಯ ಹೊಂದಬಹುದು. ಇದರಿಂದ ದಾನಿಯ ಕಾರ್ಯತತ್ಪರತೆ ಹಾಗೂ ಜ್ಞಾಪಕಶಕ್ತಿ ಹೆಚ್ಚುತ್ತದೆ. ದೇಹದಲ್ಲಿಕೊಬ್ಬಿನ ಅಂಶ ಕಡಿಮೆ ಮಾಡುವ ಮೂಲಕ ಹೃದಯಾಘಾತ ಆಗುವುದನ್ನು ಶೇ.80ರಷ್ಟು ಕಡಿಮೆ ಮಾಡುತ್ತದೆ. ರಕ್ತದ ಒತ್ತಡ, ಮಧುಮೇಹದಂತಹ ರೋಗಗಳನ್ನು ತಡೆಯಲು ಕೂಡ ರಕ್ತದಾನ ಸಹಕಾರಿ. ಅಲ್ಲದೆ ರಕ್ತದಾನ ಮಾಡುವುದರಿಂದ ಯಾವುದೇ ರೀತಿಯ ನೋವು ಆಗುವುದಿಲ್ಲ. ಕೇವಲ 20 ನಿಮಿಷ ವಿಶ್ರಾಂತಿ ಪಡೆದರೆ ಸಾಕು. 48 ಗಂಟೆಗಳಲ್ಲಿಅಷ್ಟೇ ಪ್ರಮಾಣದ ರಕ್ತ ಉತ್ಪತ್ತಿಯಾಗುತ್ತದೆ ಹಾಗೂ ಒಂದೆಡರು ವಾರಗಳಲ್ಲಿರಕ್ತದಲ್ಲಿನ ಎಲ್ಲ ಅಗತ್ಯ ಅಂಶಗಳು ಸೇರ್ಪಡೆಯಾಗುತ್ತವೆ.
ವರದಿ: ಬ್ಲಡ್ ಡೋನರ್ಸ್ ಮಂಗಳೂರು (ರಿ)
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.