ಸಂಘಪರಿವಾರದ ಗೂಂಡಾಗಿರಿಗೆ ಹೊಣೆ ಯಾರು?
ಸುಳ್ಯ (www.vknews.com) : ಸುಳ್ಯ ತಾಲೂಕಿನ ದುಗ್ಗಲಡ್ಕದಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ವ್ಯಾಪಾರಿಗಳ ಮೇಲೆ ಸಂಘಪರಿವಾರದ ಗೂಂಡಾಗಳು ನಡೆಸಿದ ಮಾರಣಾಂತಿಕ ಹಲ್ಲೆ ಕೃತ್ಯವನ್ನು ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯ ದ.ಕ. ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.
ಎರಡು ದಿನಗಳ ಹಿಂದೆ ಮಂಗಳೂರಿನ ಉರ್ವಸ್ಟೋರ್ ಬಳಿ ಜಾನುವಾರು ಸಾಗಾಟ ಮಾಡುತ್ತಿದ್ದ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಂತ್ರಸ್ತನ ಮೇಲೆ ಪೋಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿ, ಆರೋಪಿಗಳ ಮೇಲೆ ಲಘು ಸೆಕ್ಷನ್ ಹಾಕಿ ಬಂಧಿಸಿ ಕೆಲವೇ ಗಂಟೆಗಳಲ್ಲಿ ಜಾಮೀನಿನ ಮೇಲೆ ಬಿಡುಗಡೆ ಗೊಳಿಸಿದ ಪರಿಣಾಮವೇ ಸಂಘಪರಿವಾರದ ಗೂಂಡಾಗಳಿಗೆ ಕಾನೂನಿನ ಭಯವಿಲ್ಲದೆ ನೈತಿಕ ಪೋಲಿಸ್ಗಿರಿ ನಡೆಸಲು ಪ್ರೇರಣೆಯಾಗಿರುವುದು. ಗೋಸಾಗಾಟ ಮಾಡುವಾಗ ಅದನ್ನು ತಡೆದು ಪೋಲಿಸ್ ಗಿರಿ ನಡೆಸಲು ಸಂಘಪರಿವಾರಕ್ಕೆ ಗುತ್ತಿಗೆ ನೀಡಿದವರು ಯಾರು?
ಹಾಗಾದರೆ ಪೋಲಿಸರು ಯಾಕಾಗಿ ಇರುವುದು?
ಲಾಕ್ಡೌನ್ ಸಂದರ್ಭದಲ್ಲಿ ಜನ ಸಾಮಾನ್ಯರು ಸಂಕಷ್ಟದಲ್ಲಿದ್ದಾಗ ಪರಸ್ಪರ ಸಹಾಯ ಸಹಕಾರ ಮಾಡಿ ಸೌಹಾರ್ದತೆಯಿಂದ ಇರುವುದನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಸಂಘಪರಿವಾರ ಸಮಾಜದ ಸ್ವಾಸ್ಥ್ಯವನ್ನು ಕೆಡಿಸಿ ನೈತಿಕ ಪೋಲಿಸ್ಗಿರಿ ಮೂಲಕ ಜಿಲ್ಲೆಯಲ್ಲಿ ಕೋಮುಗಲಭೆ ನಡೆಸುವ ಸಂಚಿನ ಭಾಗವಾಗಿದೆ. ಪೋಲಿಸ್ ಇಲಾಖೆ ಮತ್ತು ಜಿಲ್ಲಾಡಳಿತ ಪ್ರಕರಣದಲ್ಲಿ ಸಂತ್ರಸ್ತರ ಮೇಲೆ ಪ್ರಕರಣ ದಾಖಲು ಮಾಡದೆ ಹಲ್ಲೆ ನಡೆಸಿ ನೈತಿಕ ಪೋಲಿಸ್ ಗಿರಿ ನಡೆಸಿದ ತಪ್ಪಿತಸ್ಥ ಆರೋಪಿಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಮುಂದಿನ ಎಲ್ಲಾ ವಿದ್ಯಮಾನಗಳಿಗೂ ಜಿಲ್ಲಾಡಳಿತವೇ ನೇರ ಹೊಣೆಯಾಗಲಿದೆ ಎಂದು ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ಇದರ ಜಿಲ್ಲಾಧ್ಯಕ್ಷ ಇಸ್ಮಾಈಲ್ ಶಾಫಿ ಬಬ್ಬುಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.