ಪಿಯುಸಿ ಪರೀಕ್ಷೆ – ನಿಷೇದಾಜ್ಞೆ ಜಾರಿ
ಮಂಗಳೂರು (www.vknews.com) : 2020ರ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಇಂಗ್ಲಿಷ್ ಭಾಷೆ ಪರೀಕ್ಷೆಯನ್ನು ಕೊರೊನಾ ಸಾಂಕ್ರಾಮಿಕ ರೊಗದಿಂದಾಗಿ ಮುಂದೂಡಲಾಗಿತ್ತು. ಈ ಪರೀಕ್ಷೆಯನ್ನು ಜೂನ್ 18 ರಂದು ನಡೆಸಲು ಸರ್ಕಾರ ತೀರ್ಮಾನಿಸಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸೂಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂನ್ 18 ರಂದು ಎಲ್ಲಾ 51 ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಿ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಿಂಧೂ ರೂಪೇಶ್ ನಿಷೇದಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.
ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ವಸ್ತುಗಳನ್ನು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಪೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಸಿದ ಯಾವುದೇ ವಿಷಯಗಳನ್ನು /ಮಾಹಿತಿಯನ್ನು ರವಾನಿಸುವ ಅಥವಾ ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಲಾಗಿದೆ.
ಈ ಆದೇಶವು ನಿಷೇದಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ ಸರಕಾರದಿಂದ ಅಥವಾ ಸರಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಕ್ರೀಡಾಕ್ಷೇತ್ರದಲ್ಲಿ ಸಾಧನೆ: ಪ್ರಶಸ್ತಿಗೆ ಅರ್ಜಿ ಆಹ್ವಾನ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ ಹಾಗೂ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.
ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳು 2019ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಆನ್ಲೈನ್ ನಲ್ಲಿ http://www.karunadu.karnataka.gov.in/dyes ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದು.
2019ನೇ ಸಾಲಿನ ಹಿರಿಯ ಕ್ರೀಡಾಪಟುಗಳು, ತರಬೇತುದಾರರಿಗೆ ಸಾಧನೆ ಮಾಡಿರುವ ಹಿರಿಯ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಸೇವಾ ಸಿಂಧು ಆನ್ಲೈನ್ ವೆಬ್ಸೈಟ್ http://serviceonline.gov.in/karnataka ಮೂಲಕ ಜುಲೈ 10 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯದ ಗ್ರಾಮೀಣ ಕ್ರೀಡೆಗಳಿಗೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಉದೇಶದಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ರಾಜ್ಯದ ಅರ್ಹ ಕ್ರೀಡಾಪಟುಗಳು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಸೇವಾ ಸಿಂಧು ವೆಬ್ಸೈಟ್ http://serviceonline.gov.in/karnataka ದಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ಜುಲೈ 10 ರೊಳಗೆ ಸಲ್ಲಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಪರಿಶಿಷ್ಟ ಪಂಗಡದವರಿಗೆ ಬೋರ್ವೆಲ್ ಸೌಲಭ್ಯ-ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮವು, ಪರಿಶಿಷ್ಟ ಪಂಗಡದ ಆದಿವಾಸಿ ಬುಡಕಟ್ಟು ಜನಾಂಗ (ಕೊರಗ, ಕುಡಿಯ, ಮಲೆಕುಡಿ, ಸೋಲಿಗ, ಯರವ, ಹಕ್ಕಿಪಿಕ್ಕಿ, ಗೌಡಲು, ಹಸಲರು, ಇರುಳರು, ಇರುಳಿಗ, ಜೇನು ಕುರುಬ, ಮಲೇರು, ಮೇದ, ಮೇದರಿ, ಗೌರಿಗ, ಬುರುಗ, ಸಿದ್ದಿ (ಉ.ಕ ಜಿಲ್ಲೆ), ಕಾಡುಕುರುಬ, ಕತೋಡಿ, ಕಟ್ಕರಿ, ಧೋರ್ ಕತೋಡಿ, ಧೋರ್ ಕಟ್ಕರಿ, ಸನ್ ಕತೋಡಿ, ಸನ್ ಕಟ್ಕರಿ, ಚಂಚು, ಚೆಂಚವಾರ್, ಅಡಿಯನ್, ಪಾರ್ದಿ, ಅಡವಿನ್ ಚಿಂಚರ್, ಪಾನ್ಸಿ ಪಾರ್ದಿ, ಹರಣಶಿಕಾರಿ, ತೋಡ)ದವರಿಗೆ ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ವೈಯಕ್ತಿಕ ಕೊಳವೆಬಾವಿ ಸೌಲಭ್ಯ ಕಲ್ಪಿಸಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಅಹ್ವಾಸಲಾಗಿತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಜಿ.ಎಚ್.ಎಸ್.ರಸ್ತೆ ಜನತಾ ಬಜಾರ್ ಕಟ್ಟಡ, 2ನೇ ಮಹಡಿ, ಮಂಗಳೂರು ದೂರವಾಣಿ ಸಂಖ್ಯೆ 0824-2420114 ನ್ನು ಸಂಪರ್ಕಿಸಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.